ನಾಮಪತ್ರ ಸಲ್ಲಿಸಿ ‘ಕೆಓಎ’ ಅಧ್ಯಕ್ಷ ಸ್ಥಾನಬೇಡವೆಂದರು ಕೃಷ್ಣ
ಬೆಂಗಳೂರು : ಕಳೆದ ವಾರವಷ್ಟೇ 'ಕರ್ನಾಟಕ ಒಲಂಪಿಕ್ ಸಂಸ್ಥೆ "(ಕೆಓಎ)ಯ ಅಧ್ಯಕ್ಷ ಪದವನ್ನು ಅಪೇಕ್ಷಿಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಈಗ ಮನಸ್ಸು ಬದಲಿಸಿದ್ದಾರೆ. 'ಕೆಓಎ" ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರೂ, ಆ ಪದವನ್ನೊಪ್ಪಲು ಕೃಷ್ಣ ಒಲ್ಲೆ ಎಂದಿದ್ದಾರೆ.
ಪ್ರಸ್ತುತ ಕೆಓಎ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನಿರ್ಗಮಿಸುತ್ತಿರುವ ಪಿ. ಮಲ್ಲೇಶ್ವರನ್ ಆವರಿಗೆ ಈ ಬಗ್ಗೆ ಪತ್ರ ಬರೆದಿರುವ ಕೃಷ್ಣ - 'ರಾಜ್ಯದ ವ್ಯವಹಾರಗಳ ಕಡೆ ಗಮನ ಕೊಡಬೇಕಾಗಿರುವುದರಿಂದ ಹೊಸ ಹುದ್ದೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗುವುದಿಲ್ಲ" ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಯವರು ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿರುವುದರಿಂದ ಕೆಓಎ ಯ ಇಡೀ ಚುನಾವಣೆ ಪ್ರಕ್ರಿಯೆ ಗೊಂದಲದಲ್ಲಿ ಬಿದ್ದಿದೆ. ಪ್ರಸ್ತುತ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಕಣದಲ್ಲಿ ಅಧಿಕೃತ ಅಭ್ಯರ್ಥಿಗಳೇ ಇಲ್ಲದಂತಾಗಿದೆ. ಮುಖ್ಯಮಂತ್ರಿಗಳು ಚುನಾವಣಾ ಕಣ ಪ್ರವೇಶಿಸಿದ್ದರಿಂದ ಕೆಓಎ ಯ ಎಲ್ಲಾ ಸ್ಥಾನಗಳಿಗೂ ಒಮ್ಮತದ ಅಭ್ಯರ್ಥಿಗಳನ್ನು ತರುವ ತೆರೆ ಮರೆಯ ಪ್ರಯತ್ನಗಳು ನಡೆದಿದ್ದವು.
ಒಮ್ಮತದ ಅಭ್ಯರ್ಥಿಗಳನ್ನು ತರುವ ಪ್ರಯತ್ನ ಅಧ್ಯಕ್ಷರ ಚುನಾವಣೆಯಲ್ಲಿ ಮಾತ್ರ ಯಶಸ್ವಿಯಾಗಿದೆ. ಉಳಿದ ಹುದ್ದೆಗಳ ಆಯ್ಕೆಯಲ್ಲಿ ಅಭ್ಯರ್ಥಿಗಳಲ್ಲಿ ಒಮ್ಮತ ಮೂಡದ ಕಾರಣ, ನಾಮಪತ್ರ ವಾಪಸ್ಸು ಪಡೆಯುವ ಕೊನೆಯ ದಿನವಾದ ಜೂನ್ 6 ರ ನಂತರವೂ ಕಣದಲ್ಲಿ ಅನೇಕ ಅಭ್ಯರ್ಥಿಗಳು ಉಳಿದಿದ್ದಾರೆ. ಆದರೆ, ಅಧ್ಯಕ್ಷ ಸ್ಥಾನದ ಕಣ ಮಾತ್ರ ಖಾಲಿಯಾಗಿದೆ. ಮುಂದೇನು ಅನ್ನುವುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ .
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications