ಜೂನ್ 10ರಂದು ರಾಜ್ಯಾದ್ಯಂತ ಪಿ.ಯು.ಸಿ. ಫಲಿತಾಂಶ
ಬೆಂಗಳೂರು : 2000-01ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಜೂನ್ 10ರಂದು ಭಾನುವಾರ ರಾಜ್ಯಾದ್ಯಂತ ಆಯಾ ಕಾಲೇಜುಗಳಲ್ಲಿ ಪ್ರಕಟವಾಗಲಿದೆ. ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಅವರು ಈ ವಿಷಯವನ್ನು ಪ್ರಕಟಿಸುವ ಮೂಲಕ ಇಷ್ಟು ದಿನ ಉಂಟಾಗಿದ್ದ ಗೊಂದಲಗಳಿಗೆ ಅಂತಿಮ ತೆರೆ ಎಳೆದಿದ್ದಾರೆ.
ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಗಣಕೀಕರಣ ಕಾರ್ಯ ಪೂರ್ಣಗೊಂಡಿದೆ. ಮಿಗಿಲಾಗಿ ಈಗಾಗಲೇ ರಾಜ್ಯದ ಕಾಲೇಜುಗಳಿಗೆ ಫಲಿತಾಂಶ ಪಟ್ಟಿ ಕಳುಹಿಸಿಕೊಡಲಾಗಿದೆ. ಹೀಗಾಗಿ ಜೂನ್ 10ರಂದು ಫಲಿತಾಂಶವನ್ನು ಖಂಡಿತಾ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು.
ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟಣೆಯಲ್ಲಿ ಈ ವರ್ಷ ಉಂಟಾದ ಗೊಂದಲಗಳು ಪುನರಾವರ್ತನೆ ಆಗಬಾರದು ಎಂದು ಎಚ್ಚರಿಕೆ ವಹಿಸಿದ್ದರಿಂದ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಯಿತು ಎಂದು ಅವರು ಸಮಜಾಯಿಷಿಯನ್ನೂ ನೀಡಿದರು. ಯಾವ ವೆಬ್ಸೈಟ್ನಲ್ಲಿ ಪಿಯು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂಬ ವಿವರಗಳನ್ನು ಮಾತ್ರ ಸಚಿವರು ನೀಡಲಿಲ್ಲ.
ಕಳೆದ ಏಪ್ರಿಲ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಗಳ ಫಲಿತಾಂಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಬಹುತೇಕ ಒಂದು ವಾರದಿಂದಲೂ ಕಾಯುತ್ತಲೇ ಕುಳಿತಿದ್ದಾರೆ. ಈ ಸಂಬಂಧ ಪಿ.ಯು. ಮಂಡಳಿಯನ್ನು ವಿಚಾರಿಸಿದರೆ, ಉನ್ನತ ಅಧಿಕಾರಿಗಳೆನಿಸಿಕೊಂಡವರು ತಮಗೆ ತೋಚಿದ ದಿನವನ್ನು ಹೇಳುವ ಮೂಲಕ ಮತ್ತಷ್ಟು ಗೊಂದಲ ಹುಟ್ಟು ಹಾಕಿದ್ದರು.
ಸಿ.ಇ.ಟಿ. ಘಟಕದ ಮೇಲುಸ್ತುವಾರಿ ಹೊತ್ತಿರುವ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾದ ರಾಮಪ್ರಸಾದ್ ಅವರಂತೂ ಈ ಬಗ್ಗೆ ಅಧಿಕೃತವಾಗಿ ಯಾವುದೇ ಪ್ರಕಟಣೆಯನ್ನು ಹೊರಡಿಸಿಯೇ ಇರಲಿಲ್ಲ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications