ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷಿದ್ಧ : ಕೃಷ್ಣ ಘೋಷಣೆ
ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ರಾಜ್ಯ ಸರಕಾರ ನಿಷೇಧಿಸಿರುವುದಾಗಿ ಶುಕ್ರವಾರ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಕಟಿಸಿದ್ದಾರೆ. ನಿಷೇಧವನ್ನು ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು, ಕಾನೂನಿಗೆ ಹೆಚ್ಚು ಬಲ ನೀಡುವ ಇಲ್ಲವೇ ಹೊಸ ಕಾಯಿದೆಯನ್ನೇ ಮಾಡುವುದಾಗಿ ಅವರು ಹೇಳಿದರು.
ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಸರಕಾರದ ಈ ಆದೇಶವನ್ನು ಉಲ್ಲಂಘಿಸುವವರಿಗೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಬಗ್ಗೆ ಈಗಿರುವ ಕಾಯ್ದೆಗೆ ತಿದ್ದುಪಡಿ ತರಲು ಚಿಂತಿಸಲಾಗುತ್ತಿದೆ ಎಂದರು.
ನೇರ ಧೂಮಪಾನಕ್ಕಿಂತಲೂ ಮತ್ತೊಬ್ಬರು ಬಿಡಿ, ಸಿಗರೇಟ್ ಸೇದಿ ಬಿಡುವ ಹೊಗೆ ಸೇವನೆ (ಪ್ಯಾಸ್ಯು ಸ್ಮೋಕಿಂಗ್)ಯೇ ಹೆಚ್ಚು ಅಪಾಯಕಾರಿ. ವಿದೇಶಗಳಲ್ಲಿ ಪ್ಯಾಸ್ಯೂ ಸ್ಮೋಕಿಂಗ್ನಿಂದ ಹಾನಿಗೊಳಗಾದವರು ನ್ಯಾಯಾಲಯದ ಮೊರೆ ಹೋಗಿ ಪರಿಹಾರವನ್ನೂ ಪಡೆಯುತ್ತಾರೆ ಎಂದೂ ಅವರು ಹೇಳಿದರು.
ವಿಮಾನಗಳಲ್ಲಿ ಕೂಡ ಧೂಮಪಾನ ನಿಷೇಧಿಸಲಾಗಿದೆ. ಸಾರಿಗೆ ಬಸ್ಗಳು, ರೈಲಿನಲ್ಲಿ ಕೂಡ ಧೂಮಪಾನ ನಿಷಿದ್ಧ ಆದರೂ ಜನ ಧೂಮಪಾನ ಮಾಡುತ್ತಾರೆ. ಇದನ್ನು ತಡೆಗಟ್ಟಲು ಕಾಯ್ದೆಯನ್ನು ಬಲಪಡಿಸುವುದು ಅನಿವಾರ್ಯ ಎಂದು ಅವರು ಅಭಿಪ್ರಾಯಪಟ್ಟರು.
ಪರಿಸರ ಶ್ರೀ ಪ್ರಶಸ್ತಿ: ಪರಿಸರ ಉಳಿಸಲು ಹೋರಾಡುವ ಹಾಗೂ ಪರಿಸರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಮುಂದಿನ ಸಾಲಿನಿಂದ ಪರಿಸರ ಶ್ರೀ ಪ್ರಶಸ್ತಿ ನೀಡಲಾಗುವುದು. ಈ ಪ್ರಶಸ್ತಿಯನ್ನು ಅರಣ್ಯ ಹಾಗೂ ಪರಿಸರ ಇಲಾಖೆ ವತಿಯಿಂದ ಕೊಡಮಾಡಲಾಗುವುದು ಎಂದೂ ಕೃಷ್ಣ ಹೇಳಿದರು.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಪ್ರತಿಯಾಬ್ಬ ನಾಗರಿಕರೂ ಸಹಕರಿಸಬೇಕು ಎಂದು ಕೋರಿದರು. ಸಮಾರಂಭದಲ್ಲಿ ಸಚಿವ ಕೆ.ಎಚ್. ರಂಗನಾಥ್, ಎಚ್.ಕೆ. ಪಾಟೀಲ್, ಮಂಡಳಿ ಅಧ್ಯಕ್ಷ ಉಪೇಂದ್ರ ತ್ರಿಪಾಠಿ ಮೊದಲಾದವರು ಹಾಜರಿದ್ದರು.
(ಯು.ಎನ್.ಐ/ ಇನ್ಫೋ ವರದಿ).
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications