ಬೀದರ್, ಗುಲ್ಬರ್ಗಾ ಸೇರಿ ರಾಜ್ಯದಲ್ಲಿ 50 ಸಾವಿರ ನಿವೇಶನ ಮಾರಾಟ
ಬೆಂಗಳೂರು : ಬೀದರ್, ಗುಲ್ಬರ್ಗಾ, ಬಳ್ಳಾರಿ ಸೇರಿದಂತೆ ರಾಜ್ಯದ ಇಪ್ಪತ್ತೇಳು ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಒಟ್ಟು 50 ಸಾವಿರ ನಿವೇಶನಗಳನ್ನು ವಿಂಗಡಿಸಿ, ಹರಾಜು ಮೂಲಕ ಮಾರಾಟ ಮಾಡುವ ಯೋಜನೆಗೆ ಕರ್ನಾಟಕ ರಾಜ್ಯ ಸರಕಾರ ಒಪ್ಪಿಗೆ ನೀಡಿದೆ.
2000-01ನೇ ಸಾಲಿನಲ್ಲಿ ಮೈಸೂರು, ಬೀದರ್, ಗುಲ್ಬರ್ಗಾ, ಶಿವಮೊಗ್ಗ, ಬಳ್ಳಾರಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಒಟ್ಟು 19,575 ನಿವೇಶನ ವಿಂಗಡಣೆಗೆ ಅನುಮೋದನೆ ನೀಡಲಾಗಿದೆ. ಈ ವಿಷಯವನ್ನು ರಾಜ್ಯದ ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಕೆಲವು ನಗರಾಭಿವೃದ್ಧಿ ಪ್ರಾಧಿಕಾರಗಳು ನಿವೇಶನ ಹರಾಜು ಮಾಡುವ ಯೋಜನೆಗೆ ಭೂ ಮಾಲಿಕರಿಂದ ಜಮೀನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿವೆ ಎಂದ ಅವರು, ಪ್ರತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನಿಷ್ಠ ಸಾವಿರದಿಂದ 2 ಸಾವಿರ ನಿವೇಶನಗಳನ್ನು ಮಾರಾಟ ಮಾಡಲಾಗುವುದು. ಈ ಸಂಬಂಧ ಆದೇಶ ಹೊರಡಿಸಲಾಗಿದೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಹುಡ್ಕೋದಿಂದ 200 ಕೋಟಿ ರುಪಾಯಿ ಸಾಲ ಪಡೆಯಲು ಸರಕಾರ ಉದ್ದೇಶಿಸಿದೆ. ನಿವೇಶನಗಳ ಬೇಡಿಕೆ ಬಗ್ಗೆ ಅಧ್ಯಯನ ನಡೆಸಲು ಸಂಬಂಧಿಸಿದವರಿಗೆ ಆದೇಶ ನೀಡಲಾಗಿದೆ ಎಂದೂ ಅವರು ತಿಳಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications