ತಾಂತ್ರಿಕ ಶಿಕ್ಷಣ ವೃದ್ಧಿಗೆ 60 ಬಿಲಿಯನ್ ರು. ವಿಶ್ವಬ್ಯಾಂಕ್ ಸಾಲ ಯಾಚನೆ
ಭುವನೇಶ್ವರ್ : ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತ 50ರಿಂದ 60 ಉನ್ನತ ಗುಣಮಟ್ಟದ ತಾಂತ್ರಿಕ ವಿದ್ಯಾ ಸಂಸ್ಥೆಗಳ ಸ್ಥಾಪನೆಗಾಗಿ ಭಾರತ ವು ವಿಶ್ವ ಬ್ಯಾಂಕ್ ಬಳಿ 60 ಬಿಲಿಯನ್ ರೂಪಾಯಿಗಳ ಸಾಲ ಕೇಳಿದೆ. ಅಖಿಲ ಭಾರತ ತಾಂತ್ರಿಕ ಮಂಡಳಿಯಾಂದಿಗೆ ಚರ್ಚಿಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಮಾನವ ಸಂಪನ್ಮೂಲ ಖಾತೆಯ ವಿಶೇಷ ಕಾರ್ಯದರ್ಶಿ ಅಶೋಕ್ ಚಂದ್ರ ಆರ್ಥಿಕ ಕ್ಷೇತ್ರಕ್ಕೆ ಅನುಕೂಲವಾಗುವಂತಹ ಉತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು.
ಅಮೆರಿಕಾದಲ್ಲಿ 1950- 80ರ ಅವಧಿಯಲಿ ಆರ್ಥಿಕ ಬೆಳವಣಿಗೆ ಶೇ 87ರಷ್ಟಿತ್ತು ಎಂಬುದು ಅಧ್ಯಯನಗಳಿಂದ ಸಾಬೀತಾಗಿದೆ. 80ರ ದಶಕದಲ್ಲಿ ಜಪಾನಿನಲ್ಲಿ 67 ಶೇ ಆರ್ಥಿಕ ಬೆಳೆವಣಿಗೆ ಕಂಡು ಬಂದಿದೆ. ಇವೆಲ್ಲವೂ ತಾಂತ್ರಿಕ ಸಾಮರ್ಥ್ಯ ಹೆಚ್ಚಳದ ಗುರುತುಗಳು ಎಂದು ಹೇಳಿದ ಅಶೋಕ್ ಚಂದ್ರ, ಭಾರತದಂತಹ ದೇಶದ ಆರ್ಥಿಕ ಬೆಳವಣಿಗೆಗಾಗಿ ತಾಂತ್ರಿಕ ಶಿಕ್ಷಣದ ಜರೂರು ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು. ಆದರೆ ರಾಜ್ಯ ಅಥವಾ ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಮುಂದುವರೆಯಲು ಆರ್ಥಿಕವಾಗಿ ಸಬಲವಾಗಿಲ್ಲ. ಆದ್ದರಿಂದ ವಿಶ್ವ ಬ್ಯಾಂಕ್ ನೆರವು ಪಡೆಯುವುದು ಅನಿವಾರ್ಯ ಎಂದರು. ತಾಂತ್ರಿಕ ಮಂಡಳಿಯಿಂದ ಮಾನ್ಯತೆ ಪಡೆದಿರುವ 3,500 ಕಾಲೇಜುಗಳ ಪೈಕಿ 60 ಕಾಲೇಜುಗಳನ್ನು ಉನ್ನತ ಗುಣಮಟ್ಟದ ತಾಂತ್ರಿಕ ಶಿಕ್ಷಣ ಅಳವಡಿಸಿಕೊಳ್ಳಲು ಆಯ್ಕೆ ಮಾಡಲಾಗುವುದು. ಈ ಆಯ್ಕೆಯಲ್ಲಿ ಖಾಸಗಿ ಮತ್ತು ಸರಕಾರಿ ಎಂಬ ಭೇದ ಇರುವುದಿಲ್ಲ ಎಂದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications