ಕೇಂದ್ರದ ಯೋಜನೆ ಜಾರಿ: ಸೋಂಬೇರಿ ಅಧಿಕಾರಿಗಳ ವಿರುದ್ಧ ಕ್ರಮ
ಬೆಂಗಳೂರು : ಕೇಂದ್ರ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಲವ್ಯಯ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಎಚ್ಚರಿಸಿದ್ದಾರೆ.
ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಲು ಅನುವಾಗುವಂತೆ ಅಧಿಕಾರಿಗಳು ಕಾಲವ್ಯಯ ಮಾಡದೆ ಪ್ರಸ್ತಾವನೆಗಳನ್ನು ಸಿದ್ಧಪಡಿಸಬೇಕು. ಕಾಲವ್ಯಯ ಮಾಡಿದಲ್ಲಿ ಆಯಾ ಅಧಿಕಾರಿಗಳನ್ನೇ ಕರ್ತವ ಲೋಪಕ್ಕೆ ಹೊಣೆಗಾರರನ್ನಾಗಿಸಲಾಗುವುದು ಎಂದು ಕೃಷ್ಣ ಹೇಳಿದರು. ಕೋರಮಂಗಲದಲ್ಲಿನ ಕೇಂದ್ರೀಯ ಸದನದ ಎನ್ಪಿಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಡಿಯೋ ಕಾನ್ಫರೆನ್ಸ್ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ್ದರು.
ಕೇಂದ್ರದ ಯೋಜನೆಗಳನ್ನು ಬಳಸಿಕೊಳ್ಳುವಲ್ಲಿ ಉಳಿದ ರಾಜ್ಯಗಳು ಯಶಸ್ವಿಯಾಗಿವೆ. ಇನ್ನು ಮುಂದಾದರೂ ಕೇಂದ್ರದ ಯೋಜನೆಗಳ ಸಿಂಹಪಾಲನ್ನು ಪಡೆಯುವಲ್ಲಿ ರಾಜ್ಯದ ಅಧಿಕಾರಿಗಳು ಚುರುಕಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಗೆ ಮುನ್ನ ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ವೆಂಕಯ್ಯ ನಾಯ್ಡು ಅವರೊಂದಿಗೆ ಕೃಷ್ಣ ನೇರ ಸಂವಾದ ನಡೆಸಿದರು. ಗ್ರಾಮಸಡಕ್ ಯೋಜನೆಯನ್ನು ಪ್ರಧಾನಿ ಅನುಷ್ಠಾನಗೊಳಿಸುವಲ್ಲಿ , ಸಂಸದರ ವಿಶ್ವಾಸ ಪಡೆಯುವಂತೆ ವೆಂಕಯ್ಯನಾಯ್ಡು ಕೃಷ್ಣ ಅವರಿಗೆ ಸೂಚಿಸಿದರು.
ಗ್ರಾಮಸಡಕ್ ರಾಜ್ಯದ ಪಾಲಿಗೆ ಅತ್ಯಂತ ಮಹತ್ವಪೂರ್ಣ ಯೋಜನೆಯಾಗಿದ್ದು , ಅದರ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಯೋಜನೆಯ ಜಾರಿಗಾಗಿ ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ಸಂಸದರು ಸೂಕ್ತ ಸಲಹೆ ನೀಡಿದಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಲು ಸಿದ್ಧನಾಗಿದ್ದೇನೆ ಎಂದು ನಾಯ್ಡು ಅವರಿಗೆ ಕೃಷ್ಣ ಉತ್ತರಿಸಿದರು.(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications