ನೇಪಾಳ: ಮರೆಯುವ ಮುನ್ನಮರುಕಳಿಸಿದ ಭಾವೋದ್ರೇಕ
ಕಠ್ಮಂಡು : ರಾಜ ಕುಟುಂಬದ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ನೇಪಾಳ ಆಚರಿಸುತ್ತಿರುವ ಶೋಕಾಚರಣೆಯ ಅಂತಿಮ ದಿನ- ಸೋಮವಾರ (ಜೂನ್ 11), ದೇಶಾದ್ಯಂತ ಜನತೆಯಲ್ಲಿ ಭಾವುಕ ವಾತಾವರಣ ಮರುಕಳಿಸಿದೆ. ಈ ನಡುವೆ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ತನ್ನ ವಿಚಾರಣೆಯನ್ನು ಮುಂದುವರಿಸಿದೆ.
ಬಗ್ಮತಿ ನದಿ ದಂಡೆಯಲ್ಲಿ ನಡೆಯುವ 11 ನೇ ದಿನದ ವಿಧಿಗಳನ್ನು ಪೂರೈಸುವ ಕಾರ್ಯಕ್ರಮದಲ್ಲಿ ರಾಜ ಕುಟುಂಬದ ಸದಸ್ಯರು ಹಾಗೂ ಸಚಿವ ಸಂಪುಟದ ಸದಸ್ಯರು ಭಾಗವಹಿಸುವರು. ಪಛಾಲಿಘಾಟ್ನ ಫರೀಬ್ಸ್ಥಾನ್ ಟೆಂಪಲ್ನಲ್ಲಿ ನಡೆಯುವ ಇನ್ನೊಂದು ಕಾರ್ಯಕ್ರಮದಲ್ಲಿ ಅಗಲಿದ ಆತ್ಮಗಳಿಗೆ ಶಾಂತಿ ಕೋರಲಾಗುವುದು. ಈ ಕಾರ್ಯಕ್ರಮದ ಕೊನೆ ನಿಮಿಷದ ಸಿದ್ಧತೆಗಳು ನಡೆಯುತ್ತಿವೆ.
ಶೋಕಾಚರಣೆಯ ಅಂತಿಮ ದಿನ ಉಂಟಾಗಬಹುದಾದ ಭಾವಾತಿರೇಕ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕಠ್ಮಂಡುವಿನಲ್ಲಿ ವ್ಯಾಪಕ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಅರಮನೆ ಮುಂಭಾಗದಲ್ಲಿ ಇರಿಸಿರುವ ಶೋಕ ಸಂದೇಶ ನಮೂದಿಸುವ ಪುಸ್ತಕದಲ್ಲಿ ವಿದೇಶಿಯರು ಹಾಗೂ ಸ್ಥಳೀಯರು ತಮ್ಮ ಸಂದೇಶಗಳನ್ನು ಬರೆಯುವ ಅವಧಿಯನ್ನು ಆಡಳಿತ ವಿಸ್ತರಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications