‘ಮೀಸಲುಪಡೆಗೆ ಸಿಗದ ವೀರಪ್ಪನ್ನನ್ನು ಜ್ಯೋತಿಷಿಗಳು ಹಿಡಿಯಬಲ್ಲರು’
ಹೊಸಪೇಟೆ : ಮೀಸಲು ಪಡೆ ಮತ್ತು ಪೊಲೀಸರಿಂದ ಈವರೆಗೆ ವೀರಪ್ಪನ್ನನ್ನು ಬಂಧಿಸುವುದು ಸಾಧ್ಯವಾಗಿಲ್ಲ. ಆದರೆ ಜ್ಯೋತಿಷ್ಯಶಾಸ್ತ್ರದಿಂದ ಆತನ ಬಂಧನ ಸಾಧ್ಯ ಎಂದು ಜ್ಯೋತಿಷಿಗಳ ಸಂಘದ ಅಧ್ಯಕ್ಷ, ಇಂಡಿಯನ್ ಆಸ್ಟ್ರಾಲಜಿ ಮಾಸ ಪತ್ರಿಕೆಯ ಸಂಪಾದಕ ಗುರುರಾಜ ಉಜ್ಜಯತಿ ಹೇಳಿದ್ದಾರೆ.
ಅವರು ಹಾನಗಲ್ನಲ್ಲಿ ಸೋಮವಾರ ನಡೆದ ಒಂದು ದಿನದ ಜ್ಯೋತಿಷ ಶಾಸ್ತ್ರ ಪಂಡಿತರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ತಮ್ಮ ಮಾತನ್ನು ಸಮರ್ಥಿಸಲು ಅವರು ಇಂದಿರಾಗಾಂಧಿಯನ್ನು ಉದಾಹರಿಸಿದರು. ಆಕೆಯ ಹುಟ್ಟು ಅಪರೂಪದ್ದಾಗಿತ್ತು. ಹಿಂದೆಂದೂ ಇಂತಹ ಜಾತಕ ಇರುವ ಮಹಿಳೆಯಾಬ್ಬಳು ಜನಿಸಿರಲಿಲ್ಲ. ಇಡೀ ದೇಶವನ್ನು ತನ್ನ ಆಣತಿಯಂತೆ ನಡೆಸಿಕೊಂಡು ಹೋಗುವ ಸಾಮರ್ಥ್ಯವನ್ನು ಅವರಿಗೆ ದೈವ ನೀಡಿತ್ತು ಎಂದರು.
ಸಮಾರಂಭವನ್ನು ಉದ್ಘಾಟಿಸಿದ ಹೊಸಪೇಟೆ ಕೊಟ್ಟೂರು ಮಠದ ಸ್ವಾಮೀಜಿಗಳು ಜ್ಯೋತಿಷ್ಯಶಾಸ್ತ್ರ ಯಾವತ್ತೂ ಸುಳ್ಳಾಗಿಲ್ಲ. ಆದರೆ ಅರೆ ಜ್ಞಾನದಿಂದಾಗಿ ಜ್ಯೋತಿಷಿಗಳು ಹೇಳಿದ ಭವಿಷ್ಯ ಸುಳ್ಳಾಗಿರಬಹುದು ಎಂದು ಅಭಿಪ್ರಾಯಪಟ್ಟರು.
ಜ್ಯೋತಿಷ್ಯ ಶಾಸ್ತ್ರ ಎಂಬುದು ಸಂಖ್ಯಾ ಶಾಸ್ತ್ರದ ಆಧಾರದ ಮೇಲೆ ನಿರೂಪಿತವಾದವು. ರಾಜಕಾರಣಿಗಳು, ವಿಜ್ಞಾನಿಗಳು ಮತ್ತು ಜನಸಾಮಾನ್ಯರೂ ಸೇರಿದಂತೆ ದೇಶದ ಶೇ 80 ರಷ್ಟು ಮಂದಿ ಜ್ಯೋತಿಷ್ಯ ಶಾಸ್ತ್ರ ದ ಮೇಲೆ ನಂಬಿಕೆ ಉಳ್ಳವರಾಗಿದ್ದಾರೆ ಎಂದು ಅವರು ವಿವರಿಸಿದರು.
ಗರಗನಾಗಲಾಪುರದ ಸ್ವತಃ ಜ್ಯೋತಿಷಿಯಾಗಿರುವ ಒಪ್ಪತ್ತೇಶ್ವರ ಸ್ವಾಮೀಜಿ ಮಾತನಾಡಿ ಹೊಟ್ಟೆ ಪಾಡಿಗಾಗಿ ಜ್ಯೋತಿಷ್ಯವನ್ನು ಅವಲಂಬಿಸುವವರಿಂದಲೇ ಜ್ಯೋತಿಷ್ಯಶಾಸ್ತ್ರದ ಮೇಲೆ ಅಪನಂಬಿಕೆ ಬೆಳೆದಿದೆ ಎಂದು ವಿಷಾದಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications