ಆರು ಮುಕ್ತ ವಿಶ್ವವಿದ್ಯಾಲಯ ಸ್ಥಾಪನೆಗೆ ಕೆಎಸ್ಓಯು ಇಚ್ಛೆ
ಹಾಸನ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ ರಾಜ್ಯದಲ್ಲಿ ಆರು ಮುಕ್ತ ವಿಶ್ವ ವಿದ್ಯಾಲಯಗಳನ್ನು ಆರಂಭಿಸುವ ಯೋಜನೆ ಇದೆ ಎಂದು ಮುಕ್ತ ವಿವಿಯ ಕುಲಪತಿ ಡಾ. ರಾಮೇ ಗೌಡ ತಿಳಿಸಿದ್ದಾರೆ.
ಅವರು ಮಂಗಳವಾರ ಹಾಸನ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಈಗ 50 ಅಧ್ಯಯನ ಕೇಂದ್ರಗಳಿದ್ದು, ಇನ್ನು ಒಂದು ವರ್ಷದಲ್ಲಿ 30 ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶವಿದೆ. ಪ್ರಸ್ತುತ ಉದ್ಘಾಟನೆಗೊಂಡಿರುವ ಹಾಸನ ಅಧ್ಯಯನ ಕೇಂದ್ರಕ್ಕೆ ಕೊಡಗು, ತುಮಕೂರು ಚಿಕ್ಕಮಗಳೂರು ಜಿಲ್ಲೆಗಳು ಸೇರುತ್ತವೆ ಎಂದು ರಾಮೇಗೌಡ ಹೇಳಿದರು.
ಒಂದು ಜಿಲ್ಲೆಯಲ್ಲಿ 8ರಿಂದ 14 ಕೇಂದ್ರಗಳನ್ನು ಸದ್ಯದಲ್ಲಿಯೇ ಆರಂಭಿಸಲಾಗುವುದು , ಉಳಿದ ಅಧ್ಯಯನ ಕೇಂದ್ರಗಳನ್ನು ತೆರೆಯುವ ಯೋಜನೆಯನ್ನು ನಂತರದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದ ಅವರು ಮುಕ್ತ ವಿವಿಗೆ ವರ್ಷಕ್ಕೆ 20 ಕೋಟಿ ರೂಪಾಯಿ ಅಗತ್ಯವಿದೆ. ಆದರೆ 8 ಕೋಟಿ ರೂ.ಗಳ ಅನುದಾನ ದೊರೆತಿದೆ. ಕೇಂದ್ರದಿಂದ 2 ಕೋಟಿ ರೂಪಾಯಿ ನೆರವು ಸಿಕ್ಕಿದೆ. ಇನ್ನುಳಿದ ಹಣವನ್ನು ಬೇರೆ ಮೂಲಗಳಿಂದ ಸಂಗ್ರಹಿಸಬೇಕಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಜಿ. ಪುಟ್ಟ ಸ್ವಾಮಿಗೌಡ, ರಾಜ್ಯಸಭಾ ಸದಸ್ಯ ಎಚ್. ಕೆ. ಜವರೇ ಗೌಡ ಅವರು ಉಪಸ್ಥಿತರಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications