ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ಜಲಾನಯನ ಪ್ರದೇಶದ ಕಾಮಗಾರಿಗಳಿಗೆ ಕೇಂದ್ರದ ನಿರ್ಬಂಧ

By Staff
|
Google Oneindia Kannada News

ಬೆಂಗಳೂರು : ಕಾವೇರಿ ಜಲಾನಯನ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಕೇಂದ್ರ ಜಲ ಸಂಪನ್ಮೂಲ ಇಲಾಖೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂದು ರಾಜ್ಯ ಜಲ ಸಂಪನ್ಮೂಲ ಸಚಿವ ಕುಮಾರ್‌ ಬಂಗಾರಪ್ಪ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ಜಲವಿವಾದ ಇತ್ಯರ್ಥವಾಗದೆ ಇರುವುದರಿಂದ ಜಲಾನಯನ ಪ್ರದೇಶದ ಯಾವುದೇ ಪ್ರಮುಖ ಕೆರೆ ಅಥವಾ ನಾಲೆ ದುರಸ್ತಿ ಕಾರ್ಯ ಕೈಗೊಳ್ಳುವ ಮುನ್ನ ಕೇಂದ್ರದ ಅನುಮತಿ ಪಡೆಯುವಂತೆ ಕೇಂದ್ರ ಜಲ ಸಂಪನ್ಮೂಲ ಇಲಾಖೆ ನಿರ್ಬಂಧ ವಿಧಿಸಿದೆ. ಆದರೆ, ಸಣ್ಣ ಪುಟ್ಟ ದುರಸ್ತಿ ಕಾರ್ಯ ಕೈಗೊಳ್ಳಲು ಅಡ್ಡಿಯಿಲ್ಲ ಎಂದು ಕುಮಾರ್‌ ಬಂಗಾರಪ್ಪ ಹೇಳಿದರು.

ಬೆಂಗಳೂರಿಗೆ ಆಗಮಿಸುವ ವಿಶ್ವಬ್ಯಾಂಕ್‌ ತಂಡದೊಂದಿಗೆ ಜೂನ್‌ 18 ರಂದು ಸಾಲ ಪಡೆಯುವ ಸಂಬಂಧ ಮಾತುಕತೆ ನಡೆಸಲಾಗುವುದು. ರಾಜ್ಯದಲ್ಲಿನ 253 ಹೋಬಳಿಗಳಲ್ಲಿ ತಲಾ ಒಂದು ಕೆರೆಯನ್ನು ಜಲ ಸಂವರ್ಧನೆ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲು ಅಗತ್ಯವಾದ ನೆರವನ್ನೂ ವಿಶ್ವಬ್ಯಾಂಕ್‌ನಿಂದ ಪಡೆಯಲಾಗುವುದು ಎಂದು ಸಚಿವರು ತಿಳಿಸಿದರು.

(ಇನ್ಫೋ ವಾರ್ತೆ)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X