‘ತನ್ನ ಮನೆ ಹೇಗಿದೆ ಎನ್ನುವುದನ್ನುರಾಜ್ಯ ಸರ್ಕಾರ ನೋಡಿಕೊಳ್ಳಬೇಕು’
ಮಂಗಳೂರು : ಎಲ್ಲ ರಂಗಗಳಲ್ಲಿಯೂ ವಿಫಲವಾಗಿರುವ ರಾಜ್ಯ ಸರ್ಕಾರ ತನ್ನ 18 ತಿಂಗಳ ಆಡಳಿತವನ್ನು ಆತ್ಮಾವಲೋಕನ ಮಾಡಿಕೊಳ್ಳದಿದ್ದಲ್ಲಿ ಜನ ಜಾಗೃತಿ ಆಂದೋಲನ ಹಮ್ಮಿಕೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಸವರಾಜ ಪಾಟೀಲ ಸೇಡಂ ಎಚ್ಚರಿಕೆ ನೀಡಿದ್ದಾರೆ.
ಎಲ್ಲದಕ್ಕೂ ಕೇಂದ್ರವನ್ನು ದೂರುತ್ತಿರುವ ರಾಜ್ಯ ಸರ್ಕಾರ ತನ್ನ ಮನೆ ಹೇಗಿದೆ ಎನ್ನುವುದನ್ನು ನೋಡಿಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಂತೂ ತುಘಲಕ್ ದರ್ಬಾರ್ ನಡೆದಿದೆ. ಸಮವಸ್ತ್ರ , ಪುಸ್ತಕ ವಿತರಣೆ ಸರಿಯಾಗಿ ನಡೆದಿಲ್ಲ . ಅಯೋಗ್ಯ ಹಣಕಾಸು ಮಂತ್ರಿಯಿಂದಾಗಿ ಆರ್ಥಿಕ ಕ್ಷೇತ್ರವೂ ಸಂಪೂರ್ಣವಾಗಿ ಕುಸಿದಿದೆ ಎಂದು ಸೇಡಂ ತೀವ್ರವಾಗಿ ಟೀಕಿಸಿದರು. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ರಾಜ್ಯ ಸರ್ಕಾರದ ಲೋಪಗಳನ್ನು ಎತ್ತಿ ಆಡಿದ ಸೇಡಂ, ತಮ್ಮ ಪಕ್ಷ ದುರಾಡಳಿತವನ್ನು ನೋಡಿಕೊಂಡು ಸುಮ್ಮನೆ ಕೂರುವುದಿಲ್ಲ ಎಂದರು. ಅವರ ಮಾತಿನ ಮುಖ್ಯಾಂಶಗಳು-
- ಅಭಿವೃದ್ಧಿ ಕಾಮಗಾರಿಗಾಗಿ ರಾಜ್ಯ ಸರ್ಕಾರ 1300 ಕೋಟಿ ರು. ಸಾಲ ಪಡೆಯುತ್ತಿದೆ. ಆದರೆ ಸೋರಿಕೆಯಾಗುತ್ತಿರುವ ಹಣವನ್ನು ತಡೆಯಲು ಸರ್ಕಾರ ಪ್ರಯತ್ನಿಸುತ್ತಿಲ್ಲ . ಅಬಕಾರಿ ಬಾಬ್ತಿನಲ್ಲೇ ಸುಮಾರು 1450 ಕೋಟಿ ರು. ಸೋರಿಕೆಯಾಗುತ್ತಿದೆ. ವಿದ್ಯುತ್ ಕ್ಷೇತ್ರದಲ್ಲಿ ಶೇ.38.2 ರಷ್ಟು ಸೋರಿಕೆಯಾಗುತ್ತಿದೆ. ಇದನ್ನು ಶೇ. 10 ರಷ್ಟು ಇಳಿಸಿದರೂ 1000 ಕೋಟಿ ರುಪಾಯಿ ಉಳಿತಾಯವಾಗುತ್ತದೆ.
- ಮಾಹಿತಿ ತಂತ್ರಜ್ಞಾನ, ಕೋಕಾಕೋಲಾಗಳಿಗೆ ತೆರಿಗೆ ವಿನಾಯಿತಿ ನೀಡುವ ಸರ್ಕಾರ ರೈತರ ಸಾಲದ ಬಡ್ಡಿ ಮನ್ನಾ ಮಾಡಲು ಒಪ್ಪುತ್ತಿಲ್ಲ.
- ನಗರಸಭೆ, ಪುರಸಭೆ ಚುನಾವಣೆಗಳಲ್ಲಿ ಮೀಸಲಾತಿಯನ್ನು ಕಾಂಗ್ರೆಸ್ ತನ್ನ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದೆ.
- ವಿಶ್ವ ವಿದ್ಯಾಲಯ ಮಟ್ಟದಲ್ಲಿ ಜ್ಯೋತಿಷ್ಯ ಶಾಸ್ತ್ರ ಬೋಧನೆಯನ್ನು ಬಿಜೆಪಿ ಬೆಂಬಲಿಸುತ್ತದೆ.
- ಮಹಾಜನ್ ವರದಿಗೆ ಬಿಜೆಪಿ ಬದ್ಧ . ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ, ಗಡಿ ಸಮಸ್ಯೆ ವಿಷಯದಲ್ಲಿ ರಾಜ್ಯ ಬಿಜೆಪಿ ಘಟಕ ರಾಜ್ಯ ಸರ್ಕಾರದೊಂದಿಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications