ಬೆಂಗಳೂರಿನಲ್ಲಿ 8 ಜನರಲ್ಲೊಬ್ಬರಿಗೆ ಕಾಡುತ್ತದೆ ಸಕ್ಕರೆ ಕಾಯಿಲೆ
* ಇಮ್ರಾನ್ ಖುರೇಷಿ
ಬೆಂಗಳೂರು : ಮಧುಮೇಹ (ಸಕ್ಕರೆ ಕಾಯಿಲೆ) ದಿಂದ ನರಳುತ್ತಿರುವ ಮೂವತ್ತು ದಶಲಕ್ಷ ಭಾರತೀಯರಿಗೆ ಪ್ರಾಥಮಿಕ ಮಾಹಿತಿಗಳನ್ನು ಒದಗಿಸುವ ಸೇವೆ ಆರಂಭವಾಗಿದೆ. ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಲ್ಲಿ ಆರಂಭವಾಗಿರುವ ಈ ಸೇವೆ ಏಷ್ಯಾದಲ್ಲೇ ಪ್ರಪ್ರಥಮ.
ಈ ಮಾಹಿತಿ ಸೇವೆಯಲ್ಲಿ ನುರಿತ ಪಥ್ಯತಜ್ಞರು, ನರ್ಸ್ಗಳು ಬೆಳಗ್ಗೆ 7.30ರಿಂದ ಪ್ರತಿದಿನ 12 ಗಂಟೆಗಳ ಕಾಲ ಇಂಗ್ಲಿಷ್, ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಗುಜರಾತಿ ಭಾಷೆಗಳಲ್ಲಿ ರೋಗಿಗಳಿಗೆ ಪ್ರಾಥಮಿಕ ಮಾಹಿತಿಗಳನ್ನು ಒದಗಿಸುತ್ತಾರೆ.
ಬೆಂಗಳೂರು ಅಥವಾ ಭಾರತದ ಇನ್ನಾವುದೇ ಪ್ರದೇಶಕ್ಕಿಂತ ಹೆಚ್ಚು ಮಧುಮೇಹಿಗಳಿರುವ ದಕ್ಷಿಣ ಭಾರತದ ಯಾವುದೇ ರಾಜ್ಯದ ರೋಗಿಗಳು ತಮ್ಮ ಮೂಲಭೂತ ಪ್ರಶ್ನೆಗಳಿಗೆ ಉತ್ತರವನ್ನು ಈ ಸೇವೆಯ ಉಚಿತ ದೂರವಾಣಿ ಸಂಖ್ಯೆ 1901-338014 ನಿಂದ ಪಡೆಯಬಹುದಾಗಿದೆ. ಬೆಂಗಳೂರಿನಿಂದ ಹೊರಗೆ ಇರುವವರು (ಅಲ್ಲಿ ಕೂಡ ಉಚಿತ ಸೇವೆ ಆರಂಭವಾಗುವವರೆಗೆ ) ಈ ಸಂಖ್ಯೆಗೆ ಎಸ್.ಟಿ.ಡಿ ಕೋಡ್ 080 ಸೇರಿಸಿ ಮಾಹಿತಿ ಪಡೆಯಬಹುದು.
ಈ ಸೇವೆಯಲ್ಲಿ ರೋಗಿಗಳು, ವೈದ್ಯರಿಂದ ಕೂಡ ಮಧುಮೇಹಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಮಾತ್ರ ಪರಿಹಾರ ಕೇಳಬಹುದಾಗಿದೆ. ಇದರಿಂದಾಗಿ ಮಧುಮೇಹದ ಬಗ್ಗೆ ಜನರಲ್ಲಿ ಸುಪ್ತವಾಗಿರುವ ತಪ್ಪುಕಲ್ಪನೆಗಳು ದೂರವಾಗಲಿದೆ. ಈ ರೋಗದ ಬಗ್ಗೆ ಸೂಕ್ತ ಅರಿವು ಮೂಡಿಸದಿದ್ದರೆ, ಮುಂದಿನ ಐದು ವರ್ಷಗಳಲ್ಲಿ ರೋಗದಿಂದ ಕಾಲು ಕಳೆದುಕೊಳ್ಳುವ ಹಾಗೂ ಅಂಧರಾಗುವ ರೋಗಿಗಳ ಸಂಖ್ಯೆ ಒಂದು ದಶಲಕ್ಷವನ್ನೂ ದಾಟುವ ಸಾಧ್ಯತೆ ಇದೆ ಎನ್ನುತ್ತಾರೆ ನೋವೋ ನಾರ್ಡಿಸ್ಕ್ ಫಾರ್ಮಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಕಪೂರ್.
ಸಮೀಕ್ಷೆಗಳ ರೀತ್ಯ ಬೆಂಗಳೂರಿನ ವಯಸ್ಕರಲ್ಲಿ ಶೇಕಡಾ 12.8ರಷ್ಟು ಮಂದಿ ಮಧುಮೇಹದಿಂದ ನರಳುತ್ತಿದ್ದಾರೆ ಅಥವಾ ಪ್ರತಿ 8ನೇ ವ್ಯಕ್ತಿ ಮಧುಮೇಹಿಯಾಗಿರುತ್ತಾನೆ. ದೆಹಲಿ ಹಾಗೂ ಮುಂಬಯಿಯಲ್ಲಿ ಶೇ. 11ರಷ್ಟು, ಚೆನ್ನೈನಲ್ಲಿ ಶೇಕಡಾ 13.9ರಷ್ಟು, ಪ್ರತಿಶತ 16ರಷ್ಟು ಹೈದರಾಬಾದ್ನಲ್ಲಿ ಮಧುಮೇಹಿಗಳಿದ್ದು, ಭಾರತದ ಒಟ್ಟಾರೆ ಸರಾಸರಿ 13.2ರಷ್ಟು . ಈ ಅಂಕಿಅಂಶಗಳು ಕಾಯಿಲೆಯ ತೀವ್ರತೆಯನ್ನು ಪ್ರತಿಪಾದಿಸಿದ ಹಿನ್ನೆಲೆಯಲ್ಲಿ ಈ ಮಾಹಿತಿ ಸೇವೆ ಆರಂಭಿಸಲಾಯಿತು ಎಂದು ಅವರು ಹೇಳಿದರು.
ದಕ್ಷಿಣ ಭಾರತದ ಕೆಲವು ಪ್ರದೇಶಗಳಲ್ಲಿ ಈ ಕಾಯಿಲೆಯ ತೀವ್ರತೆ ಹೆಚ್ಚಾಗಿದೆ. ಇದಕ್ಕೆ ಹಲವು ಕಾರಣಗಳಿದ್ದು, ತ್ವರಿತಗತಿಯಲ್ಲಿ ಬೆಳೆಯುತ್ತಿರುವ ನಗರೀಕರಣವೂ ಒಂದಾಗಿದೆ. ಇತ್ತೀಚಿನ ದಿನಗಳಲ್ಲಂತೂ ಸಕ್ಕರೆ ಕಾಯಿಲೆಗೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಹೈದರಾಬಾದ್ನಂತಹ ನಗರದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚಾಗಲು ರಕ್ತಸಂಬಂಧದ ಮದುವೆಗಳೂ ಕಾರಣವಾಗಿವೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ ಎಂದು ಕಪೂರ್ ತಿಳಿಸಿದ್ದಾರೆ. ನಗರ ಪ್ರದೇಶಗಳ ಜೀವನ ಕ್ರಮ, ಹೆಚ್ಚಿನ ಒತ್ತಡ, ರಕ್ತದ ಒತ್ತಡ ಮತ್ತು ಕಾಯಿಲೆಯ ಬಗ್ಗೆ ಮಾಹಿತಿಯ ಅರಿವು ಇಲ್ಲದಿರುವುದೂ ರೋಗಗ್ರಸ್ತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ.
ರೋಗವನ್ನು ಪತ್ತೆಹಚ್ಚುವಲ್ಲಿ ಆಗುತ್ತಿರುವ ವಿಳಂಬ, ಚಿಕಿತ್ಸೆಯಲ್ಲಿನ ಕೊರತೆಯಿಂದ ರೋಗ ನಿಯಂತ್ರಣ ಕಷ್ಟವಾಗಿದೆ. ರೋಗಿ ವೈದ್ಯರ ಬಳಿ ಹೋಗಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಈ ಹಿನ್ನೆಲೆಯಲ್ಲಿ ಇನ್ಫೋಲೈನ್ ಸೇವೆ ರೋಗಿಗಳಿಗೆ ಸೂಕ್ತ ಮಾಹಿತಿ ನೀಡಲಿದೆ ಎಂಬುದು ಅವರ ಅನಿಸಿಕೆ.
ಭಾರತದಲ್ಲಿ ಮಧುಮೇಹ ಇರುವ ಮದುವೆಯಾದ ಹೆಣ್ಣು ಮಕ್ಕಳು, ತಮ್ಮ ಗಂಡನ ಮನೆಯವರಿಗೆ ಕಾಯಿಲೆ ಬಗ್ಗೆ ಗೊತ್ತಾದರೆ, ತಮ್ಮ ವೈವಾಹಿಕ ಸಂಬಂಧವೇ ಕಡಿದು ಹೋದೀತು ಎಂಬ ಭಯದಿಂದ ಕಾಯಿಲೆಯನ್ನೇ ಮುಚ್ಚಿಡುತ್ತಾರೆ. ಇನ್ಸುಲಿನ್ ಕೂಡ ತೆಗೆದುಕೊಳ್ಳುವುದಿಲ್ಲ ಇಂತಹ ಪ್ರಕರಣಗಳಲ್ಲಿ ವ್ಯಾಧಿ ಉಲ್ಬಣಿಸುತ್ತದೆ ಎನ್ನುವ ಕಪೂರ್ ಸಂಸಾರ ಗುಟ್ಟು ವ್ಯಾಧಿ ರಟ್ಟು ಎಂಬ ಗಾದೆಯನ್ನು ನೆನಪಿಸುತ್ತಾರೆ.
(ಐ.ಎ.ಎನ್.ಎಸ್.)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications