ಐಟಿ ಸಂಬಂಧಿತ ಸೇವೆಗಳಲ್ಲಿ ಹೆಚ್ಚು ಉದ್ಯೋಗ ಹಾಗೂ ಆದಾಯ
ವಿಜಯವಾಡ : 2008 ರ ವೇಳೆಗೆ ಅಮೇರಿಕಾದಲ್ಲಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಹಿವಾಟು 140 ಬಿಲಿಯನ್ ಡಾಲರ್ ತಲುಪುವ ನಿರೀಕ್ಷೆಯಿದ್ದು , ಇದರಲ್ಲಿ ಭಾರತದ ಪಾಲು ಕನಿಷ್ಠ 17 ಬಿಲಿಯನ್ ಡಾಲರ್ (81 ಸಾವಿರ ಕೋಟಿ ರು.) ಗಳಷ್ಟಿರುತ್ತದೆ ಹಾಗೂ 1.1 ಮಿಲಿಯನ್ ಮಂದಿಗೆ ಉದ್ಯೋಗವಾಕಾಶ ಲಭ್ಯವಾಗುತ್ತದೆಂದು ಭಾರತೀಯ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ನ ನಿರ್ದೇಶಕ ಕರ್ನಲ್ ಎಂ. ವಿಜಯಕುಮಾರ್ ತಿಳಿದ್ದಾರೆ.
ಭಾರತದಲ್ಲಿ ಕಡಿಮೆ ಖರ್ಚಿನಲ್ಲಿ ಹೆಚ್ಚು ಶ್ರಮಶಕ್ತಿ ಲಭ್ಯವಿದೆ ಹಾಗೂ ಇಂಗ್ಲೀಷ್ ಮಾತನಾಡುವವರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಅಕೌಂಟಿಂಗ್, ಇನ್ಷೂರೆನ್ಸ್ , ಬ್ಯಾಂಕಿಂಗ್, ವೈದ್ಯಕೀಯ, ಟೆಲಿ ಮೆಡಿಸಿನ್ ಹಾಗೂ ಸಂಪರ್ಕ ಮಾಧ್ಯಮ ಕ್ಷೇತ್ರಗಳು ಕೂಡ ಕನಿಷ್ಠ ಕಂಪ್ಯೂಟರ್ ಜ್ಞಾನ ಹೊಂದಿರುವ ಕಲಾ ಹಾಗೂ ವಾಣಿಜ್ಯ ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸುತ್ತವೆ ಎಂದು ವಿಜಯಕುಮಾರ್ ಹೇಳಿದ್ದಾರೆ.
ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಏರ್ಪಡಿಸಿದ್ದ - ಐಟಿ ಸಂಬಂಧಿತ ಸೇವೆಗಳಲ್ಲಿ ವಾಣಿಜ್ಯ ಅವಕಾಶಗಳು ಎನ್ನುವ ಸೆಮಿನಾರ್ನಲ್ಲಿ ಜೂನ್ 15 ರಂದು ವಿಜಯಕುಮಾರ್ ಮಾತನಾಡುತ್ತಿದ್ದರು. ಅಮೇರಿಕಾದಲ್ಲಿನ ಐಟಿ ಸ್ಲೋಡೌನ್ ಬಗ್ಗೆ ಪ್ರಸ್ತಾಪಿಸಿದ ಅವರು, ಇದು ಹೊಸ ಅಭಿವೃದ್ಧಿ ಹಾಗೂ ಸಂಶೋಧನಾ ವಲಯಗಳ ಮೇಲೆ ಪ್ರಭಾವ ಬೀರುತ್ತದೆ. ಆದರೆ, ಹೊಸ ಅವಕಾಶಗಳಿಗೆ ಉತ್ತೇಜನ ನೀಡುತ್ತದೆ ಎಂದರು.
ಐಟಿ ಸಂಬಂಧಿತ ಸೇವೆಗಳು ಮುಖ್ಯವಾಗಿ ವಿಜಯವಾಡಾದಂಥ ಎರಡನೆ ದರ್ಜೆಯ ನಗರಗಳಲ್ಲಿ ವಾಣಿಜ್ಯವಕಾಶಗಳನ್ನು ಕಲ್ಪಿಸುತ್ತವೆ. 2001 ನೇ ಸಾಲಿನಲ್ಲಿ 1.1 ಲಕ್ಷ ಉದ್ಯೋಗಾವಕಾಶ ಹಾಗೂ 6500 ಕೋಟಿ ರುಪಾಯಿ ಆದಾಯ ಐಟಿ ಸಂಬಂಧಿತ ಸೇವೆಗಳಿಂದ ರೂಪಿತಗೊಳ್ಳುತ್ತದೆ ಎಂದು ವಿಜಯಕುಮಾರ್ ತಿಳಿಸಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications