‘ನನ್ನ ಭಾರತ ಪ್ರವಾಸ ಇತಿಹಾಸ ಬದಲಿಸುತ್ತದೆ’- ಮುಷರ್ರಫ್
ಇಸ್ಲಮಾಬಾದ್ : ತಾವು ಮುಕ್ತ ಮನಸ್ಸಿನಿಂದ ಭಾರತಕ್ಕೆ ತೆರಳುತ್ತಿದ್ದು , ಈ ಭೇಟಿ ಇತಿಹಾಸವನ್ನು ಬದಲಿಸುತ್ತದೆಂದು ಪಾಕಿಸ್ತಾನದ ಮಿಲಿಟರಿ ಆಡಳಿತಗಾರ ಜನರಲ್ ಪವ್ರೇಜ್ ಮುಷರ್ರಫ್ ತಮ್ಮ ಮೂರು ದಿನಗಳ ಭಾರತ ಪ್ರವಾಸವನ್ನು ಶುಕ್ರವಾರ ರಾತ್ರಿ ಬಣ್ಣಿಸಿಕೊಂಡಿದ್ದಾರೆ. ಮುಷರ್ರಫ್ ಭಾರತ ಭೇಟಿಯಿಂದ ಅಷ್ಟೇನೂ ಉಪಯೋಗವಿಲ್ಲ ಎಂದು ಭಾರತೀಯ ಜನತಾಪಕ್ಷದ ನಾಯಕರು ಹೇಳುತ್ತಿರುವ ಬೆನ್ನಿಗೇ ಈ ಹೇಳಿಕೆ ಹೊರಬಿದ್ದಿರುವುದು ಗಮನಾರ್ಹ.
ನಾನು ಮುಕ್ತ ಮನಸ್ಸಿನಿಂದ ಭಾರತಕ್ಕೆ ತೆರಳುತ್ತಿದ್ದೇನೆ. ಅವರು ಕೂಡ ನನ್ನಷ್ಟೇ ಮುಕ್ತವಾಗಿ ಮಾತುಕತೆಯಲ್ಲಿ ಪಾಲ್ಗೊಳ್ಳುವರೆಂದು ನಂಬಿದ್ದೇನೆ ಎಂದು ಶುಕ್ರವಾರ ರಾತ್ರಿ ದೂರದರ್ಶನ ಹಾಗೂ ಆಕಾಶವಾಣಿಯ ಪ್ಯಾನಲ್ ಡಿಸ್ಕಷನ್ನ ನೇರ ಪ್ರಸಾರದಲ್ಲಿ ಮಾತನಾಡುತ್ತಿದ್ದ ಅವರು ಹೇಳಿದರು.
ಮುಕ್ತ ಮಾತುಕತೆ- ಕಾಶ್ಮೀರ ವಿಷಯವೇ ಪ್ರಧಾನ
ಭಾರತ ಸರ್ಕಾರ ಹಾಗೂ ನಾಯಕರು ಮುಕ್ತ ಮನಸ್ಸಿನಿಂದ ಮಾತುಕತೆಯಲ್ಲಿ ತೊಡಗುವರೆಂದು ನಾನು ನಂಬಿದ್ದೇನೆ. ಈ ಸಾರಿ ನಾವು ಇತಿಹಾಸವನ್ನು ಬದಲಾಯಿಸುತ್ತೇವೆ. ನಾನು ಭಾರತಕ್ಕೆ ಹೋಗುತ್ತಿರುವುದು ಇದೇ ಉದ್ದೇಶಕ್ಕಾಗಿಯೇ. ಸಹಕಾರ ಮನೋಭಾವ ಸಾಧ್ಯವಾಗಿಸುವ ಮೂಲಕ ಹೊಸ ಶಕೆಯನ್ನು ಪ್ರಾರಂಭಿಸುತ್ತೇವೆ ಎಂದು ಮುಷರ್ರಫ್ ವಿಶ್ವಾಸ ವ್ಯಕ್ತಪಡಿಸಿದರು.
ಉಭಯ ದೇಶಗಳ ನಡುವಣ ಮಾತುಕತೆಯಲ್ಲಿ ಕಾಶ್ಮೀರ ವಿಷಯವೇ ಪ್ರಧಾನವಾದುದು ಎನ್ನುವುದನ್ನು ಒತ್ತಿ ಹೇಳಿದ ಅವರು, ಈ ಬಗ್ಗೆ ನನ್ನ ನಿಲುವು ಅತ್ಯಂತ ಸ್ಪಷ್ಟವಾಗಿದೆ, ಕಾಶ್ಮೀರ ವಿಷಯವನ್ನು ಸರಳಗೊಳಿಸುವುದು ಮಾತುಕತೆಯ ಯಶಸ್ಸಿಗೆ ಪೂರಕವಾಗುವುದಿಲ್ಲ ಎಂದು ಒತ್ತಿ ಹೇಳಿದರು.
ಅನಿಲ ಕೊಳವೆ ಪ್ರಸ್ತಾವನೆಗೆ ಅಡ್ಡಿಯಿಲ್ಲ : ಇರಾನ್ನಿಂದ ಭಾರತಕ್ಕೆ ಪಾಕಿಸ್ತಾನದ ಮೂಲಕ ಅನಿಲ ಕೊಳವೆಯನ್ನು ಅಳವಡಿಸುವ ಪ್ರಸ್ತಾವನೆಯ ಕುರಿತು ಉತ್ತರಿಸಿದ ಅವರು, ಈ ವಿಷಯದಲ್ಲಿ ಸಹಕರಿಸಲು ಪಾಕಿಸ್ತಾನ ಸಿದ್ಧವಾಗಿದೆ ಎಂದರು. ಪ್ರವಾಸ ಕಾಲದಲ್ಲಿ ಶ್ರೀನಗರದಿಂದ ಮುಝಾಪ್ಪರಾಬಾದ್ವರೆಗೆ ಬಸ್ನಲ್ಲಿ ಪ್ರಯಾಣಿಸಲು ಯಾವುದೇ ಅಭ್ಯಂತರವಿಲ್ಲವೆಂದು ಹೇಳಿದ ಅವರು, ಈ ಪ್ರಯಾಣವನ್ನು ನಾನು ಇಷ್ಟಪಡುತ್ತೇನೆ ಎಂದರು.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications