ಮಿಚಿಗನ್ ವಿ.ವಿ.ಯಿಂದ ವಿಶ್ವ ಮೌಲ್ಯಗಳ ಸಮೀಕ್ಷಾ ಸಂಶೋಧನೆ
ಬೆಂಗಳೂರು: ವಿಶ್ವದಲ್ಲಿ ಘಟಿಸುತ್ತಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಬದಲಾವಣೆಗಳ ಬಗ್ಗೆ ಹಾಗೂ ಈ ಬದಲಾವಣೆಯಲ್ಲಿ ಸಾರ್ವಜನಿಕರ ಸ್ಪಂದನವೇನು ಎಂಬುದನ್ನು ಅರಿಯಲು ಮಿಚಿಗನ್ ವಿಶ್ವವಿದ್ಯಾಲಯ 65 ರಾಷ್ಟ್ರಗಳಲ್ಲಿ ವಿಶ್ವ ಮೌಲ್ಯಗಳ ಸಮೀಕ್ಷೆ - ಸಂಶೋಧನೆ ನಡೆಸುವ ಬೃಹತ್ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ.
ಈ ಯೋಜನೆಯಡಿಯಲ್ಲಿ ಭಾರತದ ಅಧ್ಯಯನ ನಡೆಸಲು ಬೆಂಗಳೂರು ವಿಶ್ವ ವಿದ್ಯಾಲಯ ಆಯ್ಕೆಯಾಗಿದೆ. ಭಾರತದ 40 ಆಯ್ದ ಜಿಲ್ಲೆಗಳಲ್ಲಿ ನಡೆಯುವ ಈ ಸಮೀಕ್ಷೆಯಲ್ಲಿ ಹದಿನೆಂಟು ವಿಶ್ವವಿದ್ಯಾಲಯಗಳ ಅಧ್ಯಾಪಕರು ಹಾಗೂ ಸಂಶೋಧಕರು ಭಾಗವಹಿಸುತ್ತಿದ್ದಾರೆ. ಈ ಸಂಶೋಧನೆ ನಡೆಸಲು ಮಿಚಿಗನ್ ವಿ.ವಿ. ಸಾಮಾಜಿಕ ಸಂಶೋಧನೆ ಸಂಸ್ಥೆ (ಐಎಸ್ಆರ್) ಜತೆ ಒಪ್ಪಂದಕ್ಕೆ ಬೆಂಗಳೂರು ವಿ.ವಿ.ಯ ಕುಲಪತಿ ಡಾ. ಕೆ. ಸಿದ್ಧಪ್ಪ ಸಹಿ ಹಾಕಿದ್ದಾರೆ.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಸಿದ್ಧಪ್ಪ ಅವರು, ಮಿಚಿಗನ್ನಲ್ಲಿ ಇರುವಂತೆ ಬೆಂಗಳೂರು ವಿವಿಯಲ್ಲಿ ಕೂಡ ಮಾನವಿಕ ಮತ್ತು ಸಾಮಾಜಿಕ ವಿಜ್ಞಾನ ಕೇಂದ್ರ ತೆರೆಯಲಾಗುವುದು. ಅದು ವಿವಿಧ ಕಲಾ ವಿಭಾಗಗಳ ನಡುವೆ ಸಮನ್ವಯ ವೇದಿಕೆಯಾಗಿ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.
ಈ ಸಂಶೋಧನಾ ಕಾರ್ಯದ ಸಂಯೋಜಕರಾಗಿ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಸಂದೀಪ್ ಶಾಸ್ತ್ರೀ ಆಯ್ಕೆಯಾಗಿದ್ದಾರೆ. ಶಾಸ್ತ್ರೀ ಹಾಗೂ ಅವರ ಸಹೋದ್ಯೋಗಿಗಳು ಸೇರಿ ಸಿದ್ಧಪಡಿಸಿರುವ ಪ್ರಶ್ನಾವಳಿ ಸರ್ವತ್ರ ಮೆಚ್ಚುಗೆ ಗಳಿಸಿದೆ. ಇದು ಏಷ್ಯಾ ಸೇರಿದಂತೆ ತೃತೀಯ ಜಗತ್ತಿನ ದೇಶಗಳಿಗೂ ಮಾದರಿ ಪ್ರಶ್ನಾವಳಿ ಆಗಿದೆ ಎಂದು ಅವರು ಹೇಳಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications