ಮೈಸೂರು - ಬೆಂಗಳೂರು ಕಾರಿಡಾರ್ ಯೋಜನೆ ಕಾರ್ಯಗತ ಖಚಿತ
ಬೆಂಗಳೂರು : ಬೆಂಗಳೂರು - ಮೈಸೂರು ನಡುವಣ ಎಕ್ಸ್ಪ್ರೆಸ್ ಕಾರಿಡಾರ್ ಯೋಜನೆ, ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಈ ಯೋಜನೆಯನ್ನು ಕಾರ್ಯಗತವಾಗುವುದು ನೂರಕ್ಕೆ ನೂರು ಖಚಿತ ಎಂದು ಲೋಕೋಪಯೋಗಿ ಸಚಿವ ಧರ್ಮಸಿಂಗ್ ಹೇಳಿದ್ದಾರೆ.
ಬೆಂಗಳೂರು - ಮೈಸೂರು ನಡುವಿನ ಈ ಮಾರ್ಗದಲ್ಲಿ 5 ಉಪನಗರಗಳು ಬರಲಿವೆ. ಭೂಸ್ವಾಧೀನ ಪ್ರಕ್ರಿಯೆ ಬಹುತೇಕ ಪೂರ್ಣವಾಗಿದೆ. ಪರಿಹಾರ ವಿತರಣೆಯೂ ನಡೆಯುತ್ತಿದೆ. ಆದರೆ, ಯಾರೋ ಕೆಲವರು ಇದಕ್ಕೆ ಪರಿಸರದ ಹೆಸರಿನಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು - ಮೈಸೂರು ರಸ್ತೆಯಲ್ಲಿ ಆನೆ, ಸಿಂಹ, ಕರಡಿಗಳು ಓಡಾಡುತ್ತವೆಯೇ ಎಂದು ಅವರು ಪ್ರಶ್ನಿಸಿದರು.
ಪ್ರಸ್ತುತ ಕೇಂದ್ರ ಪರಿಸರ ಸಚಿವರು ವಿದೇಶ ಪ್ರವಾಸದಲ್ಲಿದ್ದು, ಅವರು ದೆಹಲಿಗೆ ಹಿಂತಿರುಗಿದ ಬಳಿಕ ಯೋಜನೆಗೆ ಅನುಮತಿ ದೊರಕಲಿದೆ ಎಂದರು. ಈ ಕಾರಿಡಾರ್ ಯೋಜನೆ ಕಾರ್ಯಗತವಾದರೆ ಬೆಂಗಳೂರಿನಿಂದ ಮೈಸೂರಿಗೆ ಕೇವಲ 1 ಗಂಟೆ 10 ನಿಮಿಷದಲ್ಲಿ ಪ್ರಯಾಣ ಮಾಡಬಹುದಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣಗಳಲ್ಲಿ ಕೂಡ ಉಪನಗರ ನಿರ್ಮಾಣವಾಗಲಿದೆ ಎಂದರು.
ಈ ಯೋಜನೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 62 ಎಕರೆ ಭೂಮಿ ನೀಡಲು ಒಪ್ಪಿದ್ದರೆ, ಜಲಮಂಡಲಿ 2 ಟಿ.ಎಂ.ಸಿ. ನೀರು ಒದಗಿಸಲು ಒಪ್ಪಿದೆ ಎಂದರು. 1995ರಲ್ಲೇ ಈ ಯೋಜನೆಗೆ ಶಿಲಾನ್ಯಾಸ ಮಾಡಲಾಗಿತ್ತು. ಅಂದಿನ ಮುಖ್ಯಮಂತ್ರಿ ಜೆ.ಎಚ್. ಪಟೇಲರು ಈ ಯೋಜನೆಗೆ ಚಾಲನೆ ನೀಡಿದ್ದರು. ನಾವು ಕಾರ್ಯಗತ ಮಾಡಲು ಯೋಜನೆಗೆ ಸಮಗ್ರ ಚಾಲನೆ ನೀಡುತ್ತಿದ್ದೇವೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications