ಕಾಶ್ಮೀರದ ಕುರಿತು ಯಾವುದೇ ರಾಜಿ ಅಸಾಧ್ಯ- ಪ್ರಧಾನಿ ವಾಜಪೇಯಿ
ಮುಂಬಯಿ : ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಆ ಕುರಿತು ಯಾವುದೇ ರಾಜಿಗೆ ಭಾರತ ಸಿದ್ಧವಿಲ್ಲ ಎಂದು ಪ್ರಧಾನಿ ವಾಜಪೇಯಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಜೂನ್ 7 ರಂದು ಬಲ ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವಾಜಪೇಯಿ, ಎರಡು ವಾರಗಳ ನಂತರ ಮಂಗಳವಾರ ದೆಹಲಿಗೆ ಮರಳುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಜುಲೈ ತಿಂಗಳಲ್ಲಿ ಪಾಕಿಸ್ತಾನದ ಮಿಲಿಟರಿ ಆಡಳಿತಗಾರ ಜನರಲ್ ಪರ್ವೇಜ್ ಮುಷರ್ರಫ್ ಅವರೊಂದಿಗೆ ನಡೆಸುವ ಮಾತುಕತೆ ಯಾವುದೇ ನಿರ್ದಿಷ್ಟ ವಿಷಯಕ್ಕೆ ಸಂಬಂಧಿಸಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ನಾನೊಬ್ಬ ಆಶಾವಾದಿ. ವಿವಿಧ ವಿಷಯಗಳನ್ನು ಸಹಕಾರ ಮನೋಭಾವದಲ್ಲಿ ತಿಳಿಗೊಳಿಸುವ ಉದ್ದೇಶದಿಂದ ಶಾಂತಿ ಮಾತುಕತೆಗೆ ತಕ್ಕ ಪರಿಸರ ಸೃಷ್ಟಿಸಿದ್ದೇವೆ ಎಂದು ಮುಷರ್ರಫ್ ಅವರೊಂದಿಗಿನ ತಮ್ಮ ಮಾತುಕತೆ ಕಾರ್ಯಕ್ರಮವನ್ನು ಬಣ್ಣಿಸಿಕೊಂಡ ಅವರು, ಪಾಕಿಸ್ತಾನ ತನ್ನ ರಕ್ಷಣಾ ವೆಚ್ಚವನ್ನು ತಗ್ಗಿಸಿಕೊಂಡಿರುವುದಕ್ಕೂ ಉದ್ದೇಶಿತ ಮಾತುಕತೆಗೂ ಯಾವುದೇ ಸಂಬಂಧ ಕಾಣಿಸುವುದಿಲ್ಲ ಎಂದರು.
ಮಣಿಪುರದಲ್ಲಿ ಹಿಂಸಾಚಾರ ದುರದೃಷ್ಟಕರವೆಂದು ಬಣ್ಣಿಸಿದ ಪ್ರಧಾನಿ, ಶಾಂತ ಚಿತ್ತತೆಯನ್ನು ಕಾಯ್ದುಕೊಂಡು ಬರುವಂತೆ ಮಣಿಪುರದ ಜನತೆಯಲ್ಲಿ ಮನವಿ ಮಾಡಿದರು. ಮಾತುಕತೆಗಳ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆ ಹೊರತು ಹಿಂಸಾಚಾರ ಯಾವುದಕ್ಕೂ ಪರಿಹಾರವಲ್ಲ ಎಂದು ಅವರು ಹೇಳಿದರು.
ಮುಂಬಯಿ ಜನತೆಗೆ ಧನ್ಯವಾದ : ಇನ್ನೊಂದು ವಾರದಲ್ಲಿ ತಾವು ಮಾಮೂಲಿನಂತೆ ಓಡಾಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದ ವಾಜಪೇಯಿ, ಮುಂಬಯಿ ನಾಗರಿಕರ ಆತಿಥ್ಯ- ಸಹಕಾರಕ್ಕಾಗಿ ಧನ್ಯವಾದ ವ್ಯಕ್ತಪಡಿಸಿದರು. ಎಂಟು ತಿಂಗಳ ಹಿಂದೆ ಮುಂಬಯಿಯ ಬ್ರೀಚ್ಕ್ಯಾಂಡಿ ಆಸ್ಪತ್ರೆಯಲ್ಲಿಯೇ ನಡೆದ ಎಡ ಮಂಡಿ ಶಸ್ತ್ರಚಿಕಿತ್ಸೆ ಸನ್ನಿವೇಶವನ್ನು ನೆನಪಿಸಿಕೊಂಡ ಅವರು, ಇಲ್ಲಿನ ಜನತೆಯ ಆತಿಥ್ಯ ನನ್ನ ಮನ ಮುಟ್ಟಿದೆ. ಈಗ ನನ್ನ ಎರಡೂ ಮಂಡಿಗಳು ಸಮರ್ಪಕವಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಆಸ್ಪತ್ರೆಯಲ್ಲಿ ಅಟಲ್ / ಶುಭಕಾಮನೆಗಳು
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications