ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಾ.ಎಲ್‌.ಹನುಮಂತಯ್ಯ, ಉಮಾಶ್ರೀ, ಕೋರೆ ವಿಧಾನ ಪರಿಷತ್ತಿಗೆ

By Staff
|
Google Oneindia Kannada News

ಬೆಂಗಳೂರು : ವಿಧಾನ ಪರಿಷತ್ತಿನ 5 ಸ್ಥಾನಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿದ ಗಣ್ಯರನ್ನು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಪ್ರಕಟಿಸಿದ್ದಾರೆ. ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎ. ಹಸನಬ್ಬ, ನಟಿ ಉಮಾಶ್ರೀ, ಮಂಡ್ಯ ಜಿಲ್ಲಾ ಮಾಜಿ ಕಾಂಗ್ರೆಸ್‌ ಅಧ್ಯಕ್ಷ ಎಂ.ಡಿ. ರಮೇಶ್‌ರಾಜ್‌ ಹಾಗೂ ಕವಿ ಡಾ.ಎಲ್‌.ಹನುಮಂತಯ್ಯ ಅವರು ವಿಧಾನಸಭೆಗೆ ಆಯ್ಕೆಯಾದ ಸದಸ್ಯರು.

ಮಂಗಳವಾರ ಸಂಜೆ ದೆಹಲಿಯಿಂದ ಹಿಂತಿರುಗಿದ ಮುಖ್ಯಮಂತ್ರಿಗಳು ತಕ್ಷಣವೇ ವಿಧಾನಪರಿಷತ್ತಿಗೆ ಶಿಫಾರಸ್ಸು ಮಾಡಿರುವ ಸದಸ್ಯರ ಪಟ್ಟಿಯನ್ನು ರಾಜ್ಯಪಾಲರಿಗೆ ಕಳಿಸಿದರು. ಹೈದರಾಬಾದಿನಲ್ಲಿರುವ ರಾಜ್ಯಪಾಲರಾದ ರಮಾದೇವಿ, ಅಲ್ಲಿಂದಲೇ ಪಟ್ಟಿಗೆ ಹಸಿರು ನಿಶಾನೆ ತೋರಿದರು. ರಾಜಕೀಯ ಒತ್ತಡದಿಂದ ತಪ್ಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ದಲಿತ ಕವಿ ಸಿದ್ಧಲಿಂಗಯ್ಯ ಅವರಿಂದ ತೆರವಾದ ಸ್ಥಾನಕ್ಕೆ ಮತ್ತೊಬ್ಬ ದಲಿತ ಕವಿ ಹನುಮಂತಯ್ಯ ಅವರನ್ನು ಮುಖ್ಯಮಂತ್ರಿ ಆರಿಸಿದ್ದರೆ, ಸಿನಿಮಾ ಮಂದಿಗೆ ಪ್ರಾತಿನಿಧ್ಯ ನೀಡುವ ಉದ್ದೇಶ ಉಮಾಶ್ರೀ ಅವರಿಗೆ ಅವಕಾಶ ಕಲ್ಪಿಸಿದೆ. ಉಳಿದ ಮೂವರೂ ಕಾಂಗ್ರೆಸ್ಸಿಗರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X