ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಡಾ.ಎಲ್.ಹನುಮಂತಯ್ಯ, ಉಮಾಶ್ರೀ, ಕೋರೆ ವಿಧಾನ ಪರಿಷತ್ತಿಗೆ
ಬೆಂಗಳೂರು : ವಿಧಾನ ಪರಿಷತ್ತಿನ 5 ಸ್ಥಾನಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿದ ಗಣ್ಯರನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಕಟಿಸಿದ್ದಾರೆ. ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎ. ಹಸನಬ್ಬ, ನಟಿ ಉಮಾಶ್ರೀ, ಮಂಡ್ಯ ಜಿಲ್ಲಾ ಮಾಜಿ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ. ರಮೇಶ್ರಾಜ್ ಹಾಗೂ ಕವಿ ಡಾ.ಎಲ್.ಹನುಮಂತಯ್ಯ ಅವರು ವಿಧಾನಸಭೆಗೆ ಆಯ್ಕೆಯಾದ ಸದಸ್ಯರು.
ಮಂಗಳವಾರ ಸಂಜೆ ದೆಹಲಿಯಿಂದ ಹಿಂತಿರುಗಿದ ಮುಖ್ಯಮಂತ್ರಿಗಳು ತಕ್ಷಣವೇ ವಿಧಾನಪರಿಷತ್ತಿಗೆ ಶಿಫಾರಸ್ಸು ಮಾಡಿರುವ ಸದಸ್ಯರ ಪಟ್ಟಿಯನ್ನು ರಾಜ್ಯಪಾಲರಿಗೆ ಕಳಿಸಿದರು. ಹೈದರಾಬಾದಿನಲ್ಲಿರುವ ರಾಜ್ಯಪಾಲರಾದ ರಮಾದೇವಿ, ಅಲ್ಲಿಂದಲೇ ಪಟ್ಟಿಗೆ ಹಸಿರು ನಿಶಾನೆ ತೋರಿದರು. ರಾಜಕೀಯ ಒತ್ತಡದಿಂದ ತಪ್ಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
(ಇನ್ಫೋ ವಾರ್ತೆ)
Comments
Story first published: Wednesday, June 20, 2001, 5:30 [IST]