ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ನ ಫಿರ್ದೋಸ್
ಹುಬ್ಬಳ್ಳಿ : ಅವಳಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಯುವ ಸದಸ್ಯ ಫಿರ್ದೋಸ್ ಕೊಣ್ಣೂರ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರೆ, ಜಾತ್ಯತೀತ ಜನತಾ ದಳದ ಅಭ್ಯರ್ಥಿ ಧಾರವಾಡದ ಸುನೀಲ ಪಾಟೀಲ್ ಉಪಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಬಿಜೆಪಿಯ ರಂಗಾ ಬುದ್ದಿ ಮತ್ತು ಕಾಂಗ್ರೆಸ್ನ ಫಿರ್ದೋಸ್ ಕೊಣ್ಣೂರ ನಡುವೆ ಏರ್ಪಟ್ಟ ಹಣಾಹಣಿಯಲ್ಲಿ ಒಟ್ಟು 73 ಸದಸ್ಯರ ಪೈಕಿ 44 ಮಂದಿಯ ಮತ ಕಾಂಗ್ರೆಸ್ ಅಭ್ಯರ್ಥಿ ಪರವಾಗಿತ್ತು. ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಾತ್ಯತೀತ ಜನತಾದಳದ ಸುನೀಲ ಪಾಟೀಲ ಎದುರಾಳಿ ಬಿಜೆಪಿಯ ಮಲ್ಲಿಕಾರ್ಜುನ ಅವರನ್ನು 19 ಮತಗಳ ಅಂತರದಿಂದ ಸೋಲಿಸಿದರು.
ಸಂಯುಕ್ತ ಜನತಾದಳದ ಮೂವರು ಸದಸ್ಯರು ಹಾಗೂ ಈ ಪಕ್ಷದ ಬೆಂಬಲಿತ ಪಕ್ಷೇತರ ಸದಸ್ಯರೊಬ್ಬರು ಮತ ಹಾಕದೇ ತಟಸ್ಥ ರಾಗಿ ಉಳಿದರು. ಕಾಂಗ್ರೆಸ್ ಸದಸ್ಯೆ ಗೌರಿ ಅಗ್ನಿಹೋತ್ರಿ ಅವರ ಮತ ನ್ಯಾಯಾಲಯದ ಆದೇಶದಂತೆ ಗಣನೆಗೆ ತೆಗೆದುಕೊಳ್ಳಲಾಗಿಲ್ಲ.
ಮೇಯರ್ ಆಗಿ ಆಯ್ಕೆಯಾದ ಫಿರ್ದೋಸ್ ಕೊಣ್ಣೂರ ಅವರು ರಸ್ತೆ ಸುಧಾರಣೆ, ಒಳಚರಂಡಿ ಸೇರಿದಂತೆ ಅವಳಿ ನಗರದ ಸೌಂದರ್ಯದ ಕಡೆಗೆ ಹೆಚ್ಚಿನ ಮಹತ್ವ ಕೊಡುವುದಾಗಿ ಪತ್ರಕರ್ತರ ಬಳಿ ಮಾತನಾಡುತ್ತಾ ಹೇಳಿದರು. ಹಿಂದಿನ ಮೇಯರ್ ಅವರಂತೆ ಸನ್ಮಾನಗಳಲ್ಲಿ ಕಾಲ ಕಳೆಯದೆ ಪ್ರತಿ ವಾರ್ಡಿಗೆ ವಾರಕ್ಕೊಮ್ಮೆಯಾದರೂ ಭೇಟಿ ನೀಡುವುದಲ್ಲದೆ, ಕುಂದುಕೊರತೆ ಪರಿಹಾರಕ್ಕೆ ವಾರ್ಡಿಗೊಂದು ಕಚೇರಿ ತೆರೆಯಲಾಗುವುದು ಎಂದರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications