ರಾಜ್ ಪ್ರಕರಣದ ಪುಸ್ತಕ : ದಿನಕರ್ಗೆ ಸರ್ಕಾರದ ನೋಟಿಸ್
ಬೆಂಗಳೂರು : ರಾಜ್ ಅಪಹರಣ ಪ್ರಕರಣದ ಬಗ್ಗೆ ಪುಸ್ತಕ ಬರೆಯುತ್ತಿರುವ ರಾಜ್ಯದ ಮಾಜಿ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ಅವರಿಗೆ ರಾಜ್ಯ ಸರ್ಕಾರ ನೋಟಿಸ್ ನೀಡಿದ್ದು , ಅದನ್ನು ಕಡೆಗಣಿಸಿರುವುದಾಗಿ ದಿನಕರ್ ತಿಳಿಸಿದ್ದಾರೆ.
ದಿನಕರ್ ಬರೆಯುತ್ತಿರುವ ಪುಸ್ತಕ, ಕಾಡುಗಳ್ಳನಿಂದ ವರನಟ ರಾಜ್ಕುಮಾರ್ ಅಪಹರಣ ಹಾಗೂ ಬಿಡುಗಡೆ ಪ್ರಕರಣದ ಗೋಪ್ಯತೆ- ಸತ್ಯಾಸತ್ಯತೆಯನ್ನು ಜನರ ಮುಂದಿಡುತ್ತದೆ ಎಂದು ನಂಬಲಾಗಿದ್ದು , ಪುಸ್ತಕ ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸುತ್ತದೆ ಎಂದು ಭಾವಿಸಲಾಗಿದೆ. ರಾಜ್ ಅಪಹರಣ ಪ್ರಕರಣದ ಬಗೆಗೆ ಸಾಕಷ್ಟು ವಿಷಯಗಳನ್ನು ಸರ್ಕಾರ ಮುಚ್ಚಿಟ್ಟಿದೆ ಎನ್ನುವ ವ್ಯಾಪಕ ಭಾವನೆ ಜನಮನದಲ್ಲಿರುವುದನ್ನು ಗಮನಿಸಬಹುದು.
ಪುರುಸೊತ್ತಿಲ್ಲ , ನನಗೆ ಇತರೆ ಕೆಲಸಗಳಿವೆ
ನನಗೆ ನನ್ನದೇ ಆದ ಕೆಲಸಗಳಿವೆ. ಬಹಳಷ್ಟು ಮಂದಿ ಪತ್ರ ಬರೆಯುತ್ತಾರೆ. ಅದನ್ನು ಗಂಭೀರವಾಗಿ ಪರಿಗಣಿಸಲಾಗಲೀ, ತಲೆ ಕೆಡಿಸಿಕೊಳ್ಳಲಾಗಲೀ ತಮಗೆ ಪುರುಸೊತ್ತಿಲ್ಲ ಎಂದು ರಾಜ್ಯ ಸರ್ಕಾರದ ನೋಟಿಸ್ಗೆ ದಿನಕರ್ ಪ್ರತಿಕ್ರಿಯಿಸಿದ್ದಾರೆ. ಸರ್ಕಾರದ ನೀತಿ- ನಿಯಮಗಳನ್ನು ಅಥವಾ ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮವನ್ನು ಬಹಿರಂಗಪಡಿಸುವುದು ಅಧಿಕಾರಿಗಳ ರಹಸ್ಯ ಕಾಯ್ದೆಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ನೋಟಿಸ್ನಲ್ಲಿ ದಿನಕರ್ ಅವರನ್ನು ಎಚ್ಚರಿಸಲಾಗಿದೆ.
ಪುಸ್ತಕವನ್ನು ಪ್ರಕಟಿಸುವ ಮುನ್ನ ಅದನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವಂತೆಯೂ ನೋಟಿಸ್ ಸೂಚಿಸಿದೆ. ಆದರೆ, ನೋಟಿಸನ್ನು ಕಡೆಗಣಿಸುವುದಾಗಿ ಸ್ಪಷ್ಟಪಡಿಸಿರುವ ದಿನಕರ್- ಪುಸ್ತಕ ರಚನೆಯಲ್ಲಿ ಗಂಭೀರವಾಗಿ ತೊಡಗಿಸಿಕೊಳ್ಳುವುದಾಗಿ ಹೇಳಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications