ರಾಜ್ಯಾದ್ಯಂತ ಛಾಯಾಚಿತ್ರಗ್ರಾಹಕರು- ಉದ್ಯಮದ ಯಶಸ್ವಿ ಬಂದ್ !
ಬೆಂಗಳೂರು : ಛಾಯಾಗ್ರಾಹಕ ವೃತ್ತಿಗೆ ಮಾರಕವಾಗಿರುವ ಕೇಂದ್ರ ಸರ್ಕಾರದ ಶೇ.5 ಸೇವಾಶುಲ್ಕ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ಛಾಯಾಚಿತ್ರಗ್ರಾಹಕರ ಸಂಘ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು , ಸಾವಿರಾರು ಛಾಯಾಚಿತ್ರಗ್ರಾಹಕರು ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಕಬ್ಬನ್ ರಸ್ತೆಯಿಂದ ಮುಖ್ಯಮಂತ್ರಿಗಳ ನಿವಾಸದವರೆಗೆ ನಡೆದ ಪ್ರತಿಭಟನೆ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಕ್ಯಾಮರಾಗಳೊಂದಿಗೆ ಬಂದಿದ್ದ ಸಾವಿರಾರು ಛಾಯಾಚಿತ್ರಗ್ರಾಹಕರು ಭಾಗವಹಿಸಿದ್ದರು. ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಎಲ್ಲ ಪ್ರಮುಖ ನಗರ, ಪಟ್ಟಣ ಪ್ರದೇಶಗಳಲ್ಲಿ ಬಂದ್ಗೆ ಸಂಪೂರ್ಣ ಪ್ರತಿಕ್ರಿಯೆ ವ್ಯಕ್ತವಾಗಿತ್ತು . ಜೂನ್ 21 ರಂದು ಕರೆ ನೀಡಿದ್ದ ಅಖಿಲ ಭಾರತ ಛಾಯಾಚಿತ್ರ ರಂಗದ ಬಂದ್ಗೆ ಪೂರಕವಾಗಿ ರಾಜ್ಯದಲ್ಲೂ ಬಂದ್- ಪ್ರತಿಭಟನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು .
ಹೊಟ್ಟೆ ಮೇಲೆ ಬರೆ ಎಳೆಯುತ್ತಿರುವ ತೆರಿಗೆ ಪದ್ಧತಿ
ಕೇಂದ್ರ ಸರ್ಕಾರ ಹೇರಿರುವ ಶೇ. 5 ರ ಸೇವಾಶುಲ್ಕ ಹಾಗೂ ರಾಜ್ಯ ಸರ್ಕಾರ ಹೇರಿರುವ ಪ್ರತಿಶತ 17 ರ ತೆರಿಗೆಯನ್ನು ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು . ಛಾಯಾಚಿತ್ರ ಉದ್ದಿಮೆಗೆ ಸಂಬಂಧಿಸಿದ ಎಲ್ಲಾ ಸ್ಟುಡಿಯೋಗಳ ಮಾಲಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿತರಕರು ಹಾಗೂ ವ್ಯಾಪಾರಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಫೋಟೋಗ್ರಫಿ ಉದ್ಯಮ ತೀರಾ ಸಂಕಷ್ಟದಲ್ಲಿದೆ ಎನ್ನುತ್ತಾರೆ ಉದ್ಯಮದ ಒಳ ಹೊರಗನ್ನು ಬಲ್ಲ ಮಂದಿ. ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ಪ್ರತಿನಿಧಿಗಳು ವಸ್ತು ಸ್ಥಿತಿಯನ್ನು ಬಿಚ್ಚಿಡುವುದು ಹೀಗೆ-
- ರಾಜ್ಯದಲ್ಲಿ ಸುಮಾರು 5 ಲಕ್ಷ ಮಂದಿ ಫೋಟೋಗ್ರಫಿ ಉದ್ಯಮವನ್ನು ನಂಬಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಕೆಲವರು ನಾಲ್ಕೈದು ಸಾವಿರ ರುಪಾಯಿ ಮಾಸಿಕ ಆದಾಯ ಗಳಿಸುತ್ತಿದ್ದರೆ, ಅನೇಕರಿಗೆ ವ್ಯಾಪಾರವೇ ಇಲ್ಲ . ಇಂಥಹ ಪರಿಸ್ಥಿತಿಯಲ್ಲಿ ಸೇವಾ ಶುಲ್ಕವನ್ನು ನೀಡುವುದು ಹೇಗೆ ?
- ಮಾರಾಟ ಶುಲ್ಕ ಇಲ್ಲದ ಕಡೆ ಸೇವಾ ಶುಲ್ಕವನ್ನು ಜಾರಿಗೆ ತರುವುದು ಸರಿ. ಆದರೆ- ಫೋಟೋ ಫಿಲ್ಮ್ , ಫೋಟೋ ಪೇಪರ್, ರಾಸಾಯನಿಕಗಳು ಸೇರಿದಂತೆ ಪ್ರತಿಯಾಂದಕ್ಕೂ ತೆರಿಗೆ ತೆರುತ್ತಿರುವ ಉದ್ಯಮ ಹೆಚ್ಚುವರಿಯಾಗಿ ಸೇವಾ ಶುಲ್ಕವನ್ನು ಭರಿಸುವುದು ಅಸಾಧ್ಯ.
- ನೆರೆಯ ತಮಿಳುನಾಡಿಗೆ ಹೋಲಿಸಿದರೆ ಮಾರಾಟ ಶುಲ್ಕದಲ್ಲಿ ವ್ಯತ್ಯಾಸವಿದೆ. ತಮಿಳುನಾಡಿನಲ್ಲಿರುವ ತೆರಿಗೆ ಪದ್ಧತಿಯನ್ನೇ ರಾಜ್ಯದಲ್ಲೂ ಅನುಸರಿಸಬೇಕು.
- ವಿದ್ಯುತ್ ಶುಲ್ಕ ಉದ್ಯಮಕ್ಕೆ ಹೊರೆಯಾಗಿ ಪರಿಣಮಿಸಿದೆ. ವಿದ್ಯುತ್ ಸರಬರಾಜು ಕೂಡ ಉತ್ತಮ ಮಟ್ಟದಲ್ಲಿಲ್ಲ . ಇಂಥ ಸಂದರ್ಭದಲ್ಲಿ ಯುಪಿಎಸ್, ಜನರೇಟರ್ಗಳನ್ನು ಬಳಸುವುದರಿಂದ ಪ್ರತಿ ಯೂನಿಟ್ ವಿದ್ಯುತ್ಗೆ 5.5 ರು. ವೆಚ್ಚವಾಗುವುದರಿಂದ, ಅದು ಕೂಡ ದುಬಾರಿಯೇ.
- ಫೋಟೋಗ್ರಫಿಯನ್ನು ಒಂದು ಉದ್ಯಮವೆಂದು ರಾಜ್ಯ ಸರ್ಕಾರ ಪರಿಗಣಿಸಬೇಕು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications