ಮೈಸೂರಿನಲ್ಲಿ ರಾಷ್ಟ್ರೀಯ ನಾಟಕ ಶಾಲೆ ಮಾದರಿಯಲ್ಲಿ ರಂಗಶಾಲೆ
ಬೆಂಗಳೂರು : ರಾಷ್ಟ್ರೀಯ ನಾಟಕ ಶಾಲೆ (ಎನ್ಎಸ್ಡಿ) ಯ ಮಾದರಿಯಲ್ಲಿ ರಾಜ್ಯದಲ್ಲಿಯೂ ನಾಟಕ ಶಾಲೆಯಾಂದನ್ನು ಆರಂಭಿಸಲು ಸರಕಾರ ತಾತ್ವಿಕ ಒಪ್ಪಿಗೆ ನೀಡಿದ್ದು , ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಾಟಕಶಾಲೆ ಮೈಸೂರಿನಲ್ಲಿ ಪ್ರಾರಂಭವಾಗಲಿದೆ.
ರಂಗಾಯಣದ ನಿರ್ದೇಶಕ ಹಾಗೂ ಹಿರಿಯ ರಂಗಕರ್ಮಿ ಪ್ರಸನ್ನ , ಮುಂದಿಟ್ಟ ಪ್ರಸ್ತಾಪವನೆಗೆ ಸರಕಾರ ಒಪ್ಪಿಗೆ ನೀಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ಗುರುವಾರ ತಿಳಿಸಿದ್ದಾರೆ. ಬಹುಕಾಲದ ಬೇಡಿಕೆ ಈಗ ಈಡೇರುತ್ತಿದ್ದು ರಂಗಾಯಣದ ಅಡಿಯಲ್ಲಿಯೇ ಈ ನಾಟಕ ಶಾಲೆ ಆರಂಭವಾಗಲಿದೆ, ಆದರೆ ಸರಕಾರದಿಂದ ಯಾವುದೇ ಆರ್ಥಿಕ ನೆರವು ಈ ಶಾಲೆಗೆ ದೊರಕುವುದಿಲ್ಲ ಎಂದು ಸಚಿವೆ ತಿಳಿಸಿದರು.
ಹಣಕಾಸು ಸೇರಿದಂತೆ ಇತರ ಸಂಪನ್ಮೂಲಗಳನ್ನು ಸ್ಥಳೀಯವಾಗಿಯೇ ಕ್ರೋಢೀಕರಿಸಿಕೊಳ್ಳುವುದಾಗಿ ಪ್ರಸನ್ನರು ತಮ್ಮ ಪ್ರಸ್ತಾವನೆಯಲ್ಲಿಯೇ ಹೇಳಿದ್ದಾರೆ. ರಾಷ್ಟ್ರೀಯ ನಾಟಕ ಶಾಲೆಯಲ್ಲಿ ದುಡಿದಿರುವ ಪ್ರಸನ್ನ ಅವರೇ ಈ ನಾಟಕ ಶಾಲೆಯ ರೂವಾರಿಯಾಗಿರುತ್ತಾರೆ. ಎಷ್ಟು ವಿದ್ಯಾರ್ಥಿಗಳನ್ನು ತೆಗೆದುಕೊಳ್ಳಬೇಕು ಮತ್ತು ತರಬೇತಿಯ ಅವಧಿ ಎಷ್ಟಿರಬೇಕು ಎಂಬ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದ ಬಳಿಕ ತೀರ್ಮಾನವಾಗಲಿದೆ ಎಂದು ಸಚಿವೆ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications