ಮೈಸೂರು, ಗುಲ್ಬರ್ಗಾ ಮೇಯರ್ ಸ್ಥಾನ ಕಾಂಗ್ರೆಸ್ ಪಾಲು
ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಯಾರಾಗಬಹುದು ಎಂಬ ಹಲವು ದಿನಗಳ ಕುತೂಹಲದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಿ.ಕೆ. ಪ್ರಕಾಶ್ 17ನೇ ಮೇಯರ್ ಆಗಿ ಹಾಗೂ ಪುಷ್ಪ ವಲ್ಲಿ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಮೈಸೂರು ಪಾಲಿಕೆಗೆ ನಡೆದಿದ್ದ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರಕಿರಲಿಲ್ಲ . ಆದಾಗ್ಯೂ ಅಧಿಕಾರ ಹಿಡಿಯಲು ಅವಿರತ ಹೋರಾಟ ನಡೆಸಿದ ಕಾಂಗ್ರೆಸ್ ಮೆಯರ್ ಹಾಗೂ ಉಪಮೇಯರ್ ಸ್ಥಾನವನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಮಹಾನಗರ ಪಾಲಿಕೆಯ ಒಟ್ಟು ಸದಸ್ಯ ಬಲ 65. ಕಾಂಗ್ರೆಸ್ ಗೆದ್ದಿದ್ದು ಕೇವಲ 23. ಕಾಂಗ್ರೆಸ್ಗೆ ಮೂವರು ಪಕ್ಷೇತರರ ಬೆಂಬಲವೂ ಇತ್ತು. ಆದರೆ, ಜಾತ್ಯತೀತ ಜನತಾದಳ 18 ಸ್ಥಾನ ಮತ್ತು ಬಿಜೆಪಿ 16 ಸ್ಥಾನಗಳಲ್ಲಿ ಜಯಗಳಿಸಿತ್ತು. ಜನಮೋರ್ಚಾ 5 ಸ್ಥಾನ ತನ್ನದಾಗಿಸಿಕೊಂಡಿತ್ತು.
ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರಕಾಶ್ ಹಾಗೂ ಪುಷ್ಪ ವಲ್ಲಿ ಅವರು ತಲಾ 28 ಮತಗಳಿಸುವ ಮೂಲಕ ಬಿ.ಜೆ.ಪಿ. ಬೆಂಬಲ ಪಡೆದಿದ್ದ, ಜನಮೋರ್ಚಾದ ಭರತೇಶ್ ಹಾಗೂ ಲಲಿತಾ ಅವರನ್ನು ಪರಾಭವಗೊಳಿಸಿ ಮೇಯರ್ ಹಾಗೂ ಉಪಮೇಯರ್ ಆಗಿ ಆಯ್ಕೆಯಾದರು.
ಗುಲ್ಬರ್ಗಾದಲ್ಲೂ ಕಾಂಗ್ರೆಸ್ ಜಯಭೇರಿ: ಪ್ರತಿಪಕ್ಷಗಳ ಒಗ್ಗೂಡುವಿಕೆಯಿಂದ ಭಾರೀ ಕುತೂಹಲ ಕೆರಳಿಸಿದ್ದ, ಗುಲ್ಬರ್ಗಾ ನಗರಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕೂಡ ಕಾಂಗ್ರೆಸ್ ಪಾಲಾಗಿದೆ. ಮಾತಿನ ಚಕಮಕಿಯ ನಡುವೆಯೂ ನಡೆದ ಚುನಾವಣೆಯಲ್ಲಿ ಕೇವಲ 1 ಮತದ ಅಂತರದಿಂದ ಜಯಸಾಧಿಸಿದ ಕಾಂಗ್ರೆಸ್ನ ದಶರತ್ ಒಂಟಿ ಅವರು ಮೇಯರ್ ಆಗಿಯೂ, ಅದೇ ಪಕ್ಷದ ಸಂತೋಷ್ ಪಾಟೀಲ್ ಅವರು ಉಪ ಮೇಯರ್ ಆಗಿಯೂ ಆಯ್ಕೆಯಾದರು.
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications