ಸಂಜಯಗಾಂಧಿ ಆಸ್ಪತ್ರೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಘಟಕ
ಬೆಂಗಳೂರು : ಜನವರಿ 26ರ ಗಣರಾಜ್ಯೋತ್ಸವದ ದಿನ ಸಂಭವಿಸಿದ ಭೀಕರ ಭೂಕಂಪದ ನಂತರ ಎಲ್ಲ ರಾಜ್ಯಗಳೂ ಪ್ರಕೃತಿ ವಿಕೋಪ ನಿರ್ವಹಣೆ ಘಟಕದ ಮಹತ್ವವನ್ನು ಕುರಿತು ಚರ್ಚಿಸಿದವು. ಕರ್ನಾಟಕ ರಾಜ್ಯhttp://www.karnatakadisaster.com ಎಂಬ ವೆಬ್ಸೈಟ್ ಆರಂಭಿಸಿದ್ದಲ್ಲದೆ, ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಯಂ ಪ್ರಕೃತಿ ವಿಕೋಪ ನಿರ್ವಹಣೆ ಸಮಿತಿಗೂ ಚಾಲನೆ ನೀಡಿತ್ತು.
ಈಗ ರಾಜ್ಯದಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಸಂಜಯಗಾಂಧೀ ಆಸ್ಪತ್ರೆಯ ಅಪಘಾತ ವಿಭಾಗ ಹಾಗೂ ಸಂಶೋಧನಾ ಕೇಂದ್ರದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಘಟಕ ತೆರೆಯಲು ನಿರ್ಧರಿಸಲಾಗಿದೆ.
ಪೀಣ್ಯದ ರೋಟರಿ ಸಂಸ್ಥೆ ಶುಕ್ರವಾರ ಆಸ್ಪತ್ರೆಗೆ ಗಾಲಿ ಕುರ್ಚಿಗಳನ್ನು ಕೊಡುಗೆಯಾಗಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ಸದಾಶಿವ ಮೂರ್ತಿ ಈ ವಿಷಯ ತಿಳಿಸಿದರು. ಇತ್ತೀಚೆಗೆ ಗುಜರಾತ್ನ ಭುಜ್ಗೆ ಭೇಟಿ ನೀಡಿದ್ದ ಕರ್ನಾಟಕದ ತಂಡ ನೀಡಿದ ಸಲಹೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಕೃತಿ ವಿಕೋಪ ಸಂಭವಿಸಿದಾಗ ತುರ್ತು ಕ್ರಮ ಕೈಗೊಳ್ಳಲು ಮತ್ತು ನೊಂದವರಿಗೆ ಪರಿಹಾರ ಒದಗಿಸಲು ಇಂತಹ ಘಟಕಗಳ ಅಗತ್ಯ ಇದೆ ಎಂದು ಅವರು ಹೇಳಿದರು. ಈ ಘಟಕದಲ್ಲಿ ಸೇವೆ ಸಲ್ಲಿಸ ಬಯಸುವ ಸ್ವಯಂ ಸೇವಕರು ಆಸ್ಪತ್ರೆಯಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಬಹುದು ಎಂದೂ ಅವರು ಹೇಳಿದರು.
ಹೆಚ್ಚಿನ ವಿವರಗಳನ್ನು 6562822, 6564178, 6567175, 6564516, 6562500 ದೂರವಾಣಿ ಸಂಖ್ಯೆಗಳ ಮೂಲಕ ಆಸ್ಪತ್ರೆಯ ನಿರ್ದೇಶಕರು, ವೈದ್ಯಾಧಿಕಾರಿಗಳು ಇಲ್ಲವೆ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಿ ಪಡೆಯಬಹುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಹಾಜರಿದ್ದ ರೋಟರಿ ಕ್ಲಬ್ ಅಧ್ಯಕ್ಷ ಎ. ಸುರೇಶ್ ಅವರು ಮಾತನಾಡಿ, ತಮ್ಮ ಸಂಸ್ಥೆಯು ಅಂಗವಿಕಲರ ಕಲ್ಯಾಣಕ್ಕೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಜೂನ್ 25ರಂದು ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 200 ಅಂಗವಿಕಲರಿಗೆ ಗಾಲಿಕುರ್ಚಿ, ತ್ರಿಚಕ್ರವಾಹನಗಳನ್ನು ವಿತರಿಸಲಿದೆ ಎಂದರು.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications