ವಿಶ್ವ ನೊಬೆಲ್ಪುರಸ್ಕೃತರ ಸಭೆಗೆ ಭಾರತದ ಯುವ ವಿಜ್ಞಾನಿಗಳು
ನವದೆಹಲಿ : ಪ್ರಥಮ ಬಾರಿಗೆ ಭಾರತವು 17 ಮಂದಿ ಯುವ ವಿಜ್ಞಾನಿಗಳ ತಂಡವೊಂದನ್ನು ವಿಶ್ವ ನೊಬೆಲ್ ಪ್ರಶಸ್ತಿ ವಿಜೇತರ ಸಭೆಗೆ ಕಳುಹಿಸಿಕೊಟ್ಟಿದೆ.
ಈ ವಿಷಯವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಮುರಳಿ ಮನೋಹರ ಜೋಶಿ ಶನಿವಾರ ಸುದ್ದಿಗಾರರಿಗೆ ತಿಳಿಸಿದರು. ಜೂನ್ 25 ರಿಂದ ಐದು ದಿನಗಳ ಕಾಲ ಜರ್ಮನಿಯ ಲಿಂಡೋದಲ್ಲಿ ನಡೆಯುವ ಈ ಸಭೆಯಲ್ಲಿ ಮುಖ್ಯವಾಗಿ ಭೌತ ಶಾಸ್ತ್ರದ ಬಗ್ಗೆ ಚರ್ಚಿಸಲಾಗುವುದು. ಭಾರತೀಯ ಯುವ ವಿಜ್ಞಾನಿಗಳಿಗೆ ಜಗತ್ತಿನ ಹಿರಿಯ ಬುದ್ಧಿಜೀವಿಗಳನ್ನು ಹಾಗೂ ವಿಜ್ಞಾನಿಗಳನ್ನು ಭೇಟಿಯಾಗುವ ಅವಕಾಶ ಒದಗಲಿದೆ.
ವೈಜ್ಞಾನಿಕ ಕ್ಷೇತ್ರದಲ್ಲಿ ವಿವಿಧ ವಲಯಗಳ ನಡುವಿನ ಅಂತರ ತುಂಬಾ ಸಣ್ಣದಾಗಿದ್ದು, ಅಧ್ಯಯನದ ಮತ್ತು ಪರಸ್ಪರ ಹಂಚಿಕೊಳ್ಳುವಿಕೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಯುವವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ತಂಡವನ್ನು ಜರ್ಮನಿಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಮುರಳಿ ಮನೋಹರ್ ಜೋಶಿ ಹೇಳಿದರು.
ಈಗಿರುವ ಸಿದ್ಧಾಂತಗಳನ್ನು ಕಣ್ಣು ಮುಚ್ಚಿ ಒಪ್ಪಿಕೊಳ್ಳುವ ಬದಲು ವಿದ್ಯಾರ್ಥಿಗಳು ಅವುಗಳಿಗೆ ಸವಾಲೆಸೆಯಬೇಕು. ಕುತೂಹಲ ಆಸಕ್ತಿ ಮತ್ತು ಅನುಮಾನ ದೃಷ್ಟಿಯಿಂದ ಅವಲೋಕಿಸಿದಾಗ ಹೊಸ ಥಿಯರಿಗಳನ್ನು ಅನ್ವೇಷಿಸುವುದು ಸುಲಭವಾಗುತ್ತದೆ ಎಂದು ಜೋಶಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜರ್ಮನಿಯ ರಾಯಭಾರಿ ಹೈಮೋ ರಿಕ್ಟರ್ ಮಾತನಾಡುತ್ತಾ, ನೋಬೆಲ್ ಪ್ರಶಸ್ತಿ ವಿಜೇತರ ಸಭೆಯಲ್ಲಿ ಯುರೋಪ್ ಮತ್ತು ಅಮೆರಿಕಾದ ಯುವ ವಿಜ್ಞಾನಿಗಳು ಮಾತ್ರ ಭಾಗವಹಿಸುತ್ತಿದ್ದರು. ಆದರೆ ಈ ಬಾರಿ ಭಾರತದ ತಂಡವೂ ಈ ಸಭೆಯಲ್ಲಿ ಭಾಗವಹಿಸುತ್ತಿದೆ. ಇದು ಭಾರತ ವೈಜ್ಞಾನಿಕವಾಗಿ ಮುಂದುವರೆಯುತ್ತಿರುವ ಸಂಕೇತವೂ ಹೌದು ಎಂದು ತಮ್ಮ ಹರ್ಷ ವ್ಯಕ್ತ ಪಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications