ಬ್ರಿಟನ್ : ಉದ್ರಿಕ್ತ ಏಷ್ಯನ್ ಯುವಕರಿಂದ ದಾಂಧಲೆ- ಬೆಂಕಿ
* ಶ್ಯಾಮ್ ಭಾಟಿಯಾ
ಲಂಡನ್ : ಏಷ್ಯನ್ ಟ್ಯಾಕ್ಸಿ ಚಾಲಕನ ಮೇಲೆ ಬಿಳಿಯರ ಗುಂಪೊಂದು ಶನಿವಾರ ರಾತ್ರಿ ದಾಳಿ ನಡೆಸಿರುವ ಪ್ರಕರಣ ವಿಕೋಪಕ್ಕೆ ಹೋಗಿದೆ. ರೊಚ್ಚಿಗೆದ್ದಿರುವ ಏಷ್ಯನ್ ಯುವಕರು ನ್ಯೂಸ್ ಏಜೆಂಟ್ ಷಾಪ್, ಪಬ್, ಸೆಕ್ಸ್ ಷಾಪ್ ಹಾಗೂ ಕಾರು- ಮತ್ತೆರಡು ವಾಹನಗಳಿಗೆ ಬೆಂಕಿ ತಾಗಿಸಿದ್ದು, ಬುರ್ನ್ಲೆ ನಗರ ಪ್ರದೇಶದಲ್ಲಿ ಎರಡನೇ ದಿನವೂ ಹಿಂಸಾಚಾರ ಮುಂದುವರಿದಿದೆ.
ಭಾನುವಾರ ಕೆಲ ಉದ್ರಿಕ್ತ ಏಷ್ಯನ್ ಯುವಕರು ಕಲ್ಲು ಹಾಗೂ ಇಟ್ಟಿಗೆ ತೂರಾಟದಲ್ಲಿ ತೊಡಗಿದ್ದರು. ಇದೇ ಮಂದಿ ಬಿಳಿಯರು ಹಾಗೂ ಪೊಲೀಸರ ವಿರುದ್ಧ ಘರ್ಷಣೆಯಲ್ಲಿ ತೊಡಗಿದ್ದಾರೆ. ಈ ನಡುವೆ ಜನಾಂಗೀಯ ನಾಯಕರು, ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸದಂತೆ ಪೊಲೀಸರು ತಡವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸಮುದಾಯದ ಪ್ರಮುಖ ನಾಯಕರಲ್ಲೊಬ್ಬರಾದ ಷಹೀದ್ ಮಲಿಕ್ ಹಿಂಸಾಚಾರವನ್ನು ಖಂಡಿಸಿದರೂ, ಇದು ಗಂಭೀರ ಪ್ರಚೋದನೆಗೆ ಉಂಟಾದ ಪ್ರತಿಕ್ರಿಯೆ ಎಂದು ಏಷ್ಯನ್ ಯುವಕರ ಕೋಪವನ್ನು ಬಣ್ಣಿಸುತ್ತಾರೆ. ದಾಳಿಗೊಳಗಾದ ಎರಡು ಪಬ್ಗಳು ಅನೈತಿಕ ಚಟುವಟಿಕೆಯ ತಾಣಗಳಾಗಿದ್ದವು ಎನ್ನುವುದನ್ನು ಮಲಿಕ್ ಎತ್ತಿ ತೋರಿಸುತ್ತಾರೆ.
ಪರಿಸ್ಥಿತಿ ಹತೋಟಿಯಲ್ಲಿ - ಪೊಲೀಸ್
ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟಪಡಿಸಿರುವ ಪೊಲೀಸ್ ವಕ್ತಾರೆಯಾಬ್ಬರು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸ್ಥಳೀಯರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಮುಂದುವರಿದಿದ್ದು , ಅಧಿಕಾರಿಗಳು ಬಾಗಿಲು ಬಾಗಿಲು ಎಡತಾಕಿ ವಿಚಾರಣೆ ನಡೆಸುತ್ತಿದ್ದಾರೆ.
ಉತ್ತರ ಇಂಗ್ಲೆಂಡ್ನಲ್ಲಿ ಏಷ್ಯನ್ನರು ಹಾಗೂ ಬಿಳಿಯರ ನಡುವೆ ಇತ್ತೀಚಿನ ತಿಂಗಳುಗಳಲ್ಲಿ ನಡೆಯುತ್ತಿರುವ ನಾಲ್ಕನೇ ಘರ್ಷಣೆಯ ಪ್ರಕರಣ ಇದಾಗಿದೆ. ಗರ್ಭಿಣಿ ಏಷ್ಯನ್ ಮಹಿಳೆಯಾಬ್ಬರ ಮೇಲೆ ನಡೆದ ದಾಳಿಯ ಪ್ರಕರಣದಲ್ಲಿ ಕಳೆದ ಮೇ ತಿಂಗಳಲ್ಲಿ ಸುಮಾರು 500 ಬ್ರಿಟನ್- ಪಾಕಿಸ್ತಾನಿ ಯುವಕರು ಪೊಲೀಸರೊಂದಿಗೆ ಕೈ ಕೈ ಮಿಲಾಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
(ಐಎಎನ್ಎಸ್)
ಮುಖಪುಟ / ಇವತ್ತು... ಈ ಹೊತ್ತು...-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications