‘ಜಿಎಸ್ಎಸ್ ಗೌರವಿಸಿ ಸರಕಾರ ಮರ್ಯಾದೆ ಉಳಿಸಿಕೊಳ್ಳಬೇಕಿತ್ತು’
ಬೆಂಗಳೂರು : ಕವಿ ಜಿ.ಎಸ್. ಶಿವರುದ್ರಪ್ಪ ಅವರಿಗೆ ವಿಧಾನ ಪರಿಷತ್ನ ಸದಸ್ಯತ್ವ ನೀಡದೇ ರಾಜ್ಯ ಸರಕಾರ ತನ್ನ ಗೌರವವನ್ನು ತಾನೇ ಕಡಿಮೆ ಮಾಡಿಕೊಂಡಿದೆ ಎಂದು ಕಥೆಗಾರ ದೇವನೂರು ಮಹಾದೇವ ಅಭಿಪ್ರಾಯಪಟ್ಟಿದ್ದಾರೆ.
ಜಿ. ಎಸ್. ಶಿವರುದ್ರಪ್ಪ ಅವರಿಗೆ 75 ವರ್ಷ ತುಂಬಿದ ಸಂದರ್ಭದಲ್ಲಿ ಬಳ್ಳಾರಿಯ ಲೋಹಿಯಾ ಪ್ರಕಾಶನ ಹೊರತಂದಿರುವ ಹಣತೆ ಅಭಿನಂದನಾ ಗ್ರಂಥವನ್ನು ಭಾನುವಾರ ನಗರದಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.
ವಿಧಾನ ಪರಿಷತ್ತಿಗೆ ನೇಮಕ ಮಾಡುವಾಗ ಸರಕಾರಕ್ಕೆ ಶಿವರುದ್ರಪ್ಪ ಅವರಿಗಿಂತ ಹಿರಿಯ ಸಾಹಿತಿ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು ಇಂತಹ ಸಾಂಸ್ಕೃತಿಕ ಚೇತನವನ್ನು ಗೌರವಿಸಿ ಸರಕಾರ ತನ್ನ ಮಾನ ಮರ್ಯಾದೆ ಕಾಪಾಡಿಕೊಳ್ಳಬೇಕಿತ್ತು ಎಂದರು.
ಈ ಸಂದರ್ಭದಲ್ಲಿ ಸಂಶೋಧಕ, ಡಾ.ಎಂ. ಚಿದಾನಂದ ಮೂರ್ತಿ , ಕೆ.ಕೆ. ಸಿದ್ಧಯ್ಯ ಹಾಗೂ ಕೆ. ರಾಮದಾಸ್ ಅವರು ಜಿಎಸ್ಎಸ್ ಅವರನ್ನು ಅಭಿನಂದಿಸಿದರು. ಸಾಹಿತ್ಯ ಹಾಗೂ ಸಾಹಿತ್ಯ ಪರಿಷತ್ತು ಕೊಳೆತು ಗೊಬ್ಬರವಾಗಿದೆ ಎಂದು ರಾಮದಾಸ್ ವಿಷಾದಿಸಿದರೆ, ಜಿಎಸ್ಸೆಸ್ ಕುವೆಂಪು ಅವರ ಉತ್ತರಾಧಿಕಾರಿ ಎಂದು ಚಿದಾನಂದ ಮೂರ್ತಿ ಬಣ್ಣಿಸಿದರು.
ಅಭಿನಂದನೆಗೆ ಉತ್ತರಿಸಿದ ಶಿವರುದ್ರಪ್ಪ ಅವರು ನನ್ನನ್ನು ದಡ್ಡನಾಗಿಸುವ ಶಿಷ್ಯವೃಂದ ಬೆಳೆಯಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ತಜ್ಞ ಎಚ್. ನರಸಿಂಹಯ್ಯ ವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications