ಇಸ್ರೋದಿಂದ ಚಂದ್ರಯಾನ : ಕೆ. ಕಸ್ತೂರಿ ರಂಗನ್ ಸಮರ್ಥನೆ
ನವದೆಹಲಿ : ಭೂಮಿಯ ಸುತ್ತ ಸುತ್ತುವ ಚಂದ್ರನಲ್ಲಿಗೆ ಅಭಿಯಾನ ಕೈಗೊಳ್ಳುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ನಿರ್ಧಾರ ಅಛಲವಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ಇಲ್ಲಿ ತಿಳಿಸಿದ್ದಾರೆ.
ಭೂಮಿಯ ಉಪಗ್ರಹವಾದ ಚಂದ್ರನ ‘ಮೂಲ’ದ ಬಗ್ಗೆ ಹಲವು ಮೂಲಭೂತ ಪ್ರಶ್ನೆಗಳು ಇವೆ. ಈ ಪ್ರಶ್ನೆಗಳಿಗೆ ಉತ್ತರ ಹುಡುಕುವ ನಿಟ್ಟಿನಲ್ಲಿ ಇಸ್ರೋ ಈ ನಿರ್ಧಾರ ಕೈಗೊಂಡಿದೆ ಎಂದ ಅವರು ಚಂದ್ರನ ಅಭಿಯಾನದ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡರು.
‘ಬಾಹ್ಯಾಕಾಶದ ಸವಾಲುಗಳು ಮತ್ತು ಚಂದ್ರಯಾನ’ ಎಂಬ ವಿಷಯದ ಕುರಿತು ಏರ್ಪಡಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಚಂದ್ರನ ಮೂಲದ ಕುರಿತು ಮೂರು ಸಿದ್ಧಾಂತಗಳಿವೆ. ಇದರಲ್ಲಿ ಯಾವ ಸಿದ್ಧಾಂತ ಸರಿ ಎಂದು ಅರಿಯುವುದು ಅಗತ್ಯ ಎಂದರು.
ಪ್ರಥಮ ಹಂತದಲ್ಲೇ ಚಂದ್ರಗ್ರಹಕ್ಕೆ ಗಗನಯಾತ್ರಿಗಳನ್ನು ಕಳುಹಿಸಿಕೊಡುವ ಸಾಧ್ಯತೆಯನ್ನು ತಳ್ಳಿಹಾಕಿದ ಅವರು, ನಮ್ಮಲ್ಲಿ ಲಭ್ಯವಿರುವ ಬಾಹ್ಯಾಕಾಶ ತಂತ್ರಜ್ಞಾನದ ನೆರವಿನಿಂದ ಈ ಅಧ್ಯಯನ ಕೈಗೊಳ್ಳಲು ಚಂದ್ರಯಾನದ ಯೋಜನೆ ರೂಪಿಸಿದ್ದೇವೆ. ಚಂದ್ರಗ್ರಹಕ್ಕೆ ಅತ್ಯಾಧುನಿಕ ಉಪಕರಣವನ್ನು ಕಳುಹಿಸಿ, ಅಧ್ಯಯನ ನಡೆಸಲಾಗುವುದು ಎಂದು ತಿಳಿಸಿದರು.
ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿಯೇ ಕಸ್ತೂರಿ ರಂಗನ್ ಅವರು ಇನ್ನಾರು ವರ್ಷದಲ್ಲಿ ಚಂದ್ರಯಾನ ಕೈಗೊಳ್ಳುವ ಸುಳಿವು ನೀಡಿದ್ದರು. ಇದು ಖಂಡಿತ ಕನಸಿನ ಯೋಜನೆಯಲ್ಲ. ಹೆಚ್ಚಿನದನ್ನು ಸಾಧಿಸಲು ನಾವು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications