ಅಡಿಕೆ ಸಿಪ್ಪೆ ಸುಲಿವ ಯಂತ್ರದ ರೂವಾರಿನರಸಿಂಹ ಭಂಡಾರಿಗೆ ಪ್ರಶಸ್ತಿ
ಬೆಂಗಳೂರು : ಅಡಿಕೆ ಸಿಪ್ಪೆ ಸುಲಿಯುವ ಯಂತ್ರವನ್ನು ಆವಿಷ್ಕರಿಸಿರುವ ಕೊಪ್ಪ ದ ನಿವಾಸಿ ನರಸಿಂಹ ಭಂಡಾರಿ ಅವರಿಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ರಾಷ್ಟ್ರೀಯ ಸಂಶೋಧನಾ ಫೌಂಡೇಷನ್ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆತಿದೆ.
ಸಂಶೋಧನಾ ಮನೋಭಾವವನ್ನು ಉತ್ತೇಜಿಸುವ ದೃಷ್ಟಿಯಿಂದ ನೀಡುವ ಈ ಪ್ರಶಸ್ತಿಗೆ ರಾಜ್ಯದಿಂದ ತಂತ್ರಜ್ಞಾನ ವಲಯದ ಆವಿಷ್ಕಾರಗಳನ್ನು ನಡೆಸಿರುವ ಇತರ ಹನ್ನೊಂದು ಮಂದಿ ಆಯ್ಕೆಯಾಗಿರುವ ವಿಷಯವನ್ನು ರಾಜ್ಯ ಕೃಷಿ ಸಚಿವ ಟಿ.ಬಿ. ಜಯಚಂದ್ರ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.
ದೇಶದ ವಿವಿಧ ಭಾಗಗಳ 1,637 ಸ್ಪರ್ಧಾರ್ಥಿಗಳ ಪೈಕಿ ಕರ್ನಾಟಕದ 12 ಮಂದಿಗೆ ಪ್ರಶಸ್ತಿ ಬಂದಿದೆ. ಪ್ರಥಮ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿರುವ ಭಂಡಾರಿ ಅವರಿಗೆ ಒಂದು ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರ ಲಭಿಸಲಿದೆ. ಬೆಳಗಾಂನ ಅಣ್ಣಾ ಸಾಹೇಬ್ ಉಡ್ಗಾವಿ ತಮ್ಮ ವಾಟರ್ ಗನ್ ಉಪಕರಣ ಆವಿಷ್ಕಾರಕ್ಕೆ , ಪುತ್ತೂರಿನ ಸುದರ್ಶನ್ ಹಾಗೂ ಇಲೆಕ್ಟ್ರಿಕ್ ವಾಟರ್ ಹೀಟರ್ ಕಂಡು ಹಿಡಿದ ಬೆಂಗಳೂರಿನ ಎ.ಆರ್.ಶಿವಕುಮಾರ್ ರಾಷ್ಟ್ರಪ್ರಶಸ್ತಿ ಪಡೆದ ಇತರ ಪ್ರಮುಖರು.
ಕೇಂದ್ರ ನೀಡುತ್ತಿರುವ ಈ ಪ್ರಶಸ್ತಿಯ ಮಾದರಿಯಲ್ಲಿಯೇ ರಾಜ್ಯ ಸರಕಾರವು ಕೃಷಿ ಪಂಡಿತ ಪ್ರಶಸ್ತಿಯನ್ನು ಆರಂಭಿಸಲಿದೆ ಎಂದು ಸಚಿವರು ತಿಳಿಸಿದರು. ಕೇಂದ್ರದ ಈ ಸಾಲಿನ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು...
Prof Anil K Gupta, executive vicechairperson, National Innovation Foundation and Professor, Indian Institute of Management, PO Box 15051, Ahmedabad 380015, Gujarat.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications