ಆಂಧ್ರ ವಿರುದ್ಧ ಸುಪ್ರೀಂಕೋರ್ಟ್ಗೆ : ರಾಜ್ಯದ ನಿರ್ಧಾರ ಅಚಲ
* ಇಮ್ರಾನ್ ಖುರೇಷಿ
ಬೆಂಗಳೂರು: ಕೃಷ್ಣ ನದಿ ಕಣಿವೆಯಲ್ಲಿ ಯಾವುದೇ ನೀರಾವರಿ ಯೋಜನೆಗೆ ಅನುಮತಿ ನೀಡಿಲ್ಲ ಎಂಬ ಕೇಂದ್ರದ ಸಮಜಾಯಿಷಿಯ ನಂತರವೂ ಆಂಧ್ರದ ಅಕ್ರಮ ನೀರಾವರಿ ಕಾಮಗಾರಿ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವ ಕರ್ನಾಟಕ ರಾಜ್ಯದ ನಿಲುವು ಬದಲಾಗಿಲ್ಲ.
ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಎಂ.ಬಿ. ನವಲ್ವಾಲಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಥೆರೇಸಾ ಭಟ್ಟಾಚಾರ್ಯ ಅವರಿಗೆ ಪತ್ರ ಬರೆದಿದ್ದು, ಕೃಷ್ಣ ನದಿ ಕೊಳ್ಳದಲ್ಲಿ ಆಂಧ್ರದ ಮೂರು ನೀರಾವರಿ ಯೋಜನೆಗಳಿಗೆ ಸಚಿವಾಲಯವು ಯಾವುದೇ ಸಮ್ಮತಿ ನೀಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಕರ್ನಾಟಕ ರಾಜ್ಯದಿಂದ ಆಕ್ಷೇಪ ಇದ್ದಾಗ್ಯೂ ಆಂಧ್ರಪ್ರದೇಶಕ್ಕೆ ಮೂರು ನೀರಾವರಿ ಕಾಮಗಾರಿ ಕೈಗೊಳ್ಳಲು ಅನುಮತಿಸಲಾಗಿರುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಕೃಷ್ಣ ಅವರು ಪ್ರಧಾನಿ ವಾಜಪೇಯಿ ಅವರಿಗೆ ಜೂನ್ 24ರಂದು ಬರೆದಿದ್ದ ಪತ್ರಕ್ಕೆ ಸಂಬಂಧಿಸಿದಂತೆ ನವಲ್ವಾಲಿಯಾ ಸಚಿವಾಲಯದ ಪರವಾಗಿ ಈ ಸ್ಪಷ್ಟೀಕರಣ ನೀಡಿದ್ದಾರೆ. ಶ್ರೀಶೈಲ ಬಲದಂಡೆ ನಾಲೆ, ಭೀಮಾ ಎಡದಂಡೆ ನೀರಾವರಿ ಯೋಜನೆ ಮತ್ತು ಪುಲಿಚಿಂತಲ ಯೋಜನೆಗಳ ಸಂಬಂಧ ರಾಜ್ಯ ತಕರಾರು ಸಲ್ಲಿಸಿದೆ.
ಆದಾಗ್ಯೂ ಆಂಧ್ರ ಸರಕಾರ ಶಾಶ್ವತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಕೈಗೊಂಡಿದೆ. ಅಕ್ರಮವಾಗಿ ಫೀಡರ್ ಕಾಲುವೆಗಳನ್ನು ನಿರ್ಮಿಸುತ್ತಿದೆ. ಈ ಸಂಬಂಧ ಕಾಮಗಾರಿ ನಿಲ್ಲಿಸುವಂತೆ ನಿರ್ದೇಶನ ಕೋರಿ ರಾಜ್ಯ ಸರಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಿದೆ. ನಾವು ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗೇ ಹೋಗುತ್ತೇವೆ ಎಂದು ರಾಜ್ಯದ ನೀರಾವರಿ ಇಲಾಖೆ ಕಾರ್ಯದರ್ಶಿ ಎಸ್.ಜೆ. ಚನ್ನಬಸಪ್ಪ ಅವರು ತಿಳಿಸಿದ್ದಾರೆ.
ಶ್ರೀಶೈಲ ಯೋಜನೆಗೆ ಯೋಜನಾ ಆಯೋಗ 1981ರಲ್ಲಿಯೇ ಹಣ ವಿನಿಯೋಗ ಅನುಮತಿ ನೀಡಿತ್ತು. ಪುಲಿಂಚಲ ಮತ್ತು ಭೀಮಾ ಎಡದಂಡೆ ಯೋಜನೆಗಳ ಪ್ರಸ್ತಾವಕ್ಕೆ 1996ರಲ್ಲಿ ಅನುಮತಿ ನೀಡಲಾಗಿತ್ತು. ಆದರೆ ಈ ಎಲ್ಲ ಯೋಜನಾ ಅನುಮತಿಗಳು ನಿಬಂಧನೆಗಳಿಗೊಳಪಟ್ಟಿವೆ ಎಂದು ಸ್ಪಷ್ಟಪಡಿಸಲಾಗಿದೆ. ಮೂರೂ ಯೋಜನೆಗಳು ಯೋಜನಾ ಆಯೋಗದಿಂದ ಅಂತಿಮ ಅನುಮತಿ ಪಡೆದಿಲ್ಲ ಎಂದು ತಾವು ಹೇಳಿದ್ದನ್ನು ಪತ್ರಿಕೆಗಳು ತಪ್ಪಾಗಿ ವರದಿ ಮಾಡಿವೆ ಎಂದೂ ನವಲ್ವಾಲಾ ಅವರು ರಾಜ್ಯಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
(ಐ.ಎ.ಎನ್.ಎಸ್.)
ಮುಖಪುಟ / ಇವತ್ತು... ಈ ಹೊತ್ತು...-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications