ಬೆಂಗಳೂರಿನ ಅಂಗವಿಕಲರು ಲೈಟ್ ಬಿಲ್ ಕಟ್ಟಲು ಕ್ಯೂ ನಿಲ್ಲಬೇಕಿಲ್ಲ!
ಬೆಂಗಳೂರು : ನಗರದ ಕೆಲವು ಸಿವಿಲ್ ಸರ್ವೆಂಟ್ಗಳು ಕೊನೆಗೂ ಕರುಣಾಮಯಿಗಳಾಗಿದ್ದಾರೆ. ಇನ್ನು ಮುಂದೆ ಅಂಗವಿಕಲರು ಲೈಟ್ ಬಿಲ್ ಕಟ್ಟಲು ಕ್ಯೂ ನಿಲ್ಲಬೇಕಿಲ್ಲ. ಯಾವುದೋ ಪತ್ರ ಪಡೆಯಲು ಬಿಡಿಎಗೆ ಎಡತಾಕಬೇಕಿಲ್ಲ. ಅಧಿಕಾರಿಗಳು ಇವರಿಗಾಗೇ ವಿಶೇಷ ಸವಲತ್ತು ಜಾರಿಗೆ ತಂದಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ಡಾಟ್ಕಾಂನಲ್ಲಿ ಈ ವರದಿ ಪ್ರಕಟವಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣಾ ಇಲಾಖೆ (ಕೆಪಿಟಿಸಿಎಲ್) ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಂಗವಿಕಲರ ಮೊರೆಗೆ ಸ್ಪಂದಿಸಿವೆ. ಸಂಸ್ಥೆಗಳು ನೋಡಲ್ ಅಧಿಕಾರಿಯಾಬ್ಬರನ್ನು ನಿಯೋಜಿಸಲಿದ್ದು , ಇವರು ಅಂಗವಿಕಲರ ಕೆಲಸ ಸರಾಗ ಮಾಡಿಕೊಡಲಿದ್ದಾರೆ. ಆಡಳಿತ ಉಪ ಆಯುಕ್ತ ಯಶವಂತ್ ಪ್ರತಿ ಮಾಹೆಯ ಮೊದಲ ಸೋಮವಾರ 3ರಿಂದ 5 ಗಂಟೆಯವರೆಗೆ ಅಂಗವಿಕಲರಿಗೆ ಸಂಬಂಧಿಸಿದ ಕೆಲಸಗಳನ್ನು ಪರಿಶೀಲಿಸಲಿದ್ದಾರೆ.
ಕೆಪಿಟಿಸಿಎಲ್ ಹಾಗೂ ಬಿಡಿಎ ಅಂಗವಿಕಲರನ್ನು ಕ್ಯೂನಲ್ಲಿ ನಿಲ್ಲಿಸದೆ ಫಟಾಫಟನೆ ಕೆಲಸ ಮಾಡಿಕೊಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸುತ್ತೋಲೆ ಹೊರಡಿಸಿವೆ. ಕೆಪಿಟಿಸಿಎಲ್ನ ಬಿಲ್ ಸ್ವೀಕರಿಸುವ ಪ್ರತಿ ಕೌಂಟರ್ ಹಾಗೂ ಸಂಚಾರಿ ಕೌಂಟರ್ಗಳ ಸಿಬ್ಬಂದಿಗೂ ಅಂಗವಿಕಲರನ್ನು ಸತಾಯಿಸದೆ, ಆದ್ಯತೆ ನೀಡುವಂತೆ ತಿಳಿಸಲಾಗಿದೆ. ನೀರು ಸರಬರಾಜು ಮತ್ತು ಒಳ ಚರಂಡಿ ಇಲಾಖೆ, ಬಿಎಂಟಿಸಿ, ಕೆಎಸ್ಆರ್ಟಿಸಿ, ರೈಲ್ವೆ ನಿಲ್ದಾಣಗಳು, ಬ್ಯಾಂಕು, ಜಿಲ್ಲಾಧಿಕಾರಿಗಳ ಕಚೇರಿ ಮೊದಲಾದ 15 ಇಲಾಖೆಗಳಲ್ಲೂ ಈ ಸವಲತ್ತನ್ನು ಸದ್ಯದಲ್ಲೇ ವಿಸ್ತರಿಸಲಾಗುವುದು. ಕರುಣಾಮಯಿ ಅಧಿಕಾರಿಗಳಿಗೆ ಜೈ.
(ದಟ್ಸ್ ಕನ್ನಡ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications