ಕರುಣಾನಿಧಿ ಬಂಧನ : ಪ್ರಧಾನಿ ವಾಜಪೇಯಿ ದಿಗ್ಭ್ರಮೆ
*ಪಿ.ಜಯರಾಂ
ನವದೆಹಲಿ : ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಬಂಧನ ಹಾಗೂ ಕೇಂದ್ರ ಸಚಿವರ ಮೇಲಿನ ಪೊಲೀಸ್ ದೌರ್ಜನ್ಯದ ಬಗೆಗೆ ಪ್ರಧಾನಿ ವಾಜಪೇಯಿ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಶನಿವಾರ ಮೊದಲ ಜಾವ ಬೆಳಗ್ಗೆ 2 ಗಂಟೆ ಸುಮಾರಿಗೆ ಗೋಪಾಲಪುರಂ ನಿವಾಸದಿಂದ ಕರುಣಾನಿಧಿ ಅವರನ್ನು ಪೊಲೀಸರು ಒರಟಾಗಿ ಹೊತ್ತೊಯ್ದ ಪ್ರಕರಣವನ್ನು ಪ್ರಧಾನಿ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಅಧಿಕೃತ ವಕ್ತಾರರು ಹೇಳಿದ್ದಾರೆ. ಕೇಂದ್ರ ಸಚಿವರಾದ ಮುರಸೋಳಿ ಮಾರನ್ ಹಾಗೂ ಟಿ.ಆರ್. ಬಾಲು ಅವರ ಮೇಲೆ ನಡೆದಿರುವ ಪೊಲೀಸ್ ಹಲ್ಲೆಯನ್ನು ಪ್ರಧಾನಿ ಖಂಡಿಸಿದ್ದಾರೆಂದೂ ವಕ್ತಾರ ಅಶೋಕ್ ಟಂಡನ್ ತಿಳಿಸಿದ್ದಾರೆ.
ಟಿವಿಯಲ್ಲಿ ಪೊಲೀಸ್ ಆತಿಥ್ಯ ವೀಕ್ಷಿಸಿದ ವಾಜಪೇಯಿ
ಬೆಳಗ್ಗೆ 4 ಗಂಟೆ ವೇಳೆಗೆ ಕರುಣಾನಿಧಿ ಬಂಧನದ ಪ್ರಕರಣವನ್ನು ತಿಳಿದ ಪ್ರಧಾನಿ, ಕರುಣಾನಿಧಿ ಅವರನ್ನು ಪೊಲೀಸರು ಎಳೆದೊಯ್ಯುವುದನ್ನು ಹಾಗೂ ಕೇಂದ್ರ ಸಚಿವರಿಗೆ ಪೊಲೀಸ್ ಆತಿಥ್ಯದ ದೃಶ್ಯಗಳನ್ನು ಟಿವಿಯಲ್ಲಿ ವೀಕ್ಷಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ, ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಹಾಗೂ ಪ್ರತಿ ಕ್ಷಣದ ಬೆಳವಣಿಗೆಗಳನ್ನು ವರದಿ ಮಾಡುವಂತೆ ತಮಿಳುನಾಡು ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.
ವಿಧಾನಸಭೆಯ ಮಾಜಿ ಸ್ಪೀಕರ್ ಸೇರಿದಂತೆ ತಮಿಳುನಾಡಿನಲ್ಲಿ ಡಿಎಂಕೆ ನಾಯಕರನ್ನು ಬಂಧಿಸುತ್ತಿರುವ ವಿಷಯದ ಬಗ್ಗೆ ಮಾಹಿತಿ ಹೊಂದಿರುವ ಪ್ರಧಾನಿ, ಮುಖ್ಯಮಂತ್ರಿ ಜಯಲಲಿತಾ ಅವರನ್ನು ಸಂಪರ್ಕಿಸುವ ತೀವ್ರ ಪ್ರಯತ್ನದಲ್ಲಿದ್ದಾರೆ ಎಂದೂ ಟಂಡನ್ ತಿಳಿಸಿದ್ದಾರೆ.
(ಐಎಎನ್ಎಸ್)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications