ಬೆಂಗಳೂರಲ್ಲಿ ಆಟೋ ಮುಷ್ಕರ, ಟ್ಯಾಕ್ಸಿಗೆಡಿಮ್ಯಾಂಡೋ ಡಿಮ್ಯಾಂಡು
ಬೆಂಗಳೂರು : ಸೋಮವಾರ ನಗರದ ರಸ್ತೆಗಳಲ್ಲಿ ಆಟೋಗಳು ಎಲ್ಲೋ ಅಲ್ಲೊಂದು ಇಲ್ಲೊಂದು. ಕೆಲವು ಕಡೆ ಅವುಗಳ ಸಂಚಾರಕ್ಕೂ ಇದ್ದಕ್ಕಿದ್ದಂತೆ ಸಂಚಕಾರ. ಚಾಲಕರ ಮೇಲೆ ಪೊಲೀಸರ ದೌರ್ಜನ್ಯ ವಿರೋಧಿಸಿ ಆಟೋರಿಕ್ಷಾಗಳ ಒಕ್ಕೂಟ ಸೋಮವಾರ ಸಂಪೂರ್ಣ ಬಂದ್ಗೆ ಕರೆ ನೀಡಿದ್ದು, ಅದು ಸಾಕಷ್ಟು ಯಶಸ್ವಿಯಾಗಿದೆ.
ಇತ್ತೀಚೆಗೆ ಎಂ.ಜಿ.ರಸ್ತೆಯಲ್ಲಿ ರಾತ್ರೋ ರಾತ್ರಿ ಕನ್ನಡ ಸಂಖ್ಯಾ ಫಲಕ ಹಾಕಿದ್ದ ಆಟೋ ಚಾಲಕನೊಬ್ಬನ ವಿರುದ್ಧ ಪೊಲೀಸರು ಕ್ರಮ ಜರುಗಿಸಿದ್ದರು. ಇದನ್ನು ವಿರೋಧಿಸಿ ತಕ್ಷಣವೇ ಹಿಂಡುಗಟ್ಟಲೆ ಆಟೋಗಳು ರಸ್ತೆ ರೋಕೋ ಮಾಡಿದ್ದವು. ಈ ಘಟನೆ ನಂತರ ಇಂಥಾ ಪ್ರಕರಣಗಳು ಮರುಕಳಿಸಿದವು. ಈ ಹಿನ್ನೆಲೆಯಲ್ಲಿ ಪೊಲೀಸರ ಗೋಳು ಹೊಯ್ದುಕೊಳ್ಳುವ ಕ್ರಮ ವಿರೋಧಿಸಿ ಆಟೋ ಚಾಲಕರು ಮುಷ್ಕರ ನಡೆಸಿದ್ದಾರೆ.
ಮುಷ್ಕರದ ಕಾರಣ ಎಲ್ಲೋ ಅಲ್ಲೊಂದು ಇಲ್ಲೊಂದು ಆಟೋಗಳು ಕಾಣಿಸುತ್ತಿವೆ. ಅವುಗಳ ಚಾಲಕರು ಬಾಯಿಗೆ ಬಂದಂತೆ ಹಣ ಸುಲಿಯುತ್ತಿದ್ದಾರೆ. ಇನ್ನು ಕೆಲವು ಕಡೆ ಓಡಾಡುತ್ತಿರುವ ಆಟೋಗಳನ್ನು ತಡೆಗಟ್ಟಿ, ಮುಷ್ಕರದಲ್ಲಿ ಭಾಗವಹಿಸುವಂತೆ ಒತ್ತಾಯಿಸುವುದೂ ಉಂಟು. ಮುಂಜಾನೆಯಂತೂ ಆಟೋಗಳನ್ನೇ ನೆಚ್ಚಿಕೊಂಡಿರುವ ಮಂದಿಗೆ ದೊಡ್ಡ ಪೆಟ್ಟು. ಪರಿಣಾಮ ಕಚೇರಿಗೆ ಲೇಟು. ಆಟೋಗಳ ಮುಷ್ಕರದಿಂದ ಟ್ಯಾಕ್ಸಿಗಳಿಗೆ ಸೋಮವಾರ ಎಲ್ಲಿಲ್ಲದ ಡಿಮ್ಯಾಂಡು.
ಇದು ಕಾನೂನು ಬಾಹಿರ : ಈ ಮುಷ್ಕರದ ಬಗ್ಗೆ ಪೊಲೀಸ್ ಕಮಿಷನರ್ ಟಿ.ಮಡಿಯಾಳ್ ಪ್ರತಿಕ್ರಿಯಿಸಿರುವುದು ಹೀಗೆ- ಆಟೋ ಚಾಲಕರೊಂದಿಗೆ ಸಹಕರಿಸುವುದಾಗಿ ಪೊಲೀಸ್ ಇಲಾಖೆ ಭರವಸೆ ಕೊಟ್ಟಿದ್ದರೂ ಆಟೋ ಚಾಲಕರು ಮುಷ್ಕರ ನಡೆಸುತ್ತಿರುವುದು ಕಾನೂನು ಬಾಹಿರ. ಅವರ ಅತಿರೇಕಕ್ಕೆ ಸೊಪ್ಪು ಹಾಕುವುದರ ಬದಲು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಅಶುದ್ಧ ಪೆಟ್ರೋಲಿಯಂ ಉತ್ಪನ್ನಗಳನ್ನು ಬಳಸಿ ಸಂಚರಿಸುವ ಆಟೋ ಚಾಲಕರಿಗೆ ತಕ್ಕ ಶಾಸ್ತಿ ಮಾಡಲಿವೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications