ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಡ್ವಾಣಿ ನಿರೀಕ್ಷೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರಕ್ಕೆ

By Staff
|
Google Oneindia Kannada News

ನವದೆಹಲಿ : ತಮಿಳುನಾಡಿನ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಸೋಮವಾರ ಸಂಜೆ 6.30ಕ್ಕೆ ನಡೆಯಬೇಕಿದ್ದ ಕೇಂದ್ರ ಸಚಿವ ಸಂಪುಟ ಸಭೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.

ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ದ ಸಭೆ ಸೋಮವಾರ ಸಂಜೆ 6 ಗಂಟೆಗೆ ನಡೆಯಲಿದೆ. ಪ್ರಸ್ತುತ ವಿದೇಶದಲ್ಲಿರುವ ಗೃಹ ಸಚಿವ ಎಲ್‌.ಕೆ.ಅಡ್ವಾಣಿ ಮಂಗಳವಾರ ದೇಶಕ್ಕೆ ಮರಳಲಿದ್ದು, ಸಚಿವ ಸಂಪುಟ ಸಭೆಯಲ್ಲಿ ಅವರೂ ಭಾಗವಹಿಸುವರು.

ಮಂಗಳವಾರದ ಸಭೆಗೆ ಪೂರ್ವ ಸಿದ್ಧತೆಯಾಗಿ ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ತಮಿಳುನಾಡಿನಲ್ಲಿ ಯಾವ ಸಂವಿಧಾನಾತ್ಮಕ ಪರಿಹಾರ ಕಂಡುಕೊಳ್ಳಬಹುದೆಂದು ಚರ್ಚಿಸಲಾಗುವುದು. ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಸಚಿವರುಗಳು ಎನ್‌ಡಿಎ ಸಬೆಯಲ್ಲಿ ಭಾಗವಹಿಸಲಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X