Get Updates
Get notified of breaking news, exclusive insights, and must-see stories!

ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಪ್ರಗತಿಗಾಗಿ ವಿಶೇಷ ಯೋಜನೆ

ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಶೈಕ್ಷಣಿಕವಾಗಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿರುವ ಗುಲ್ಬರ್ಗಾ, ರಾಯಚೂರು, ಕೊಪ್ಪಳ, ಬೀದರ್‌, ಬಳ್ಳಾರಿ, ಬಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಈ ಭಾಗದಲ್ಲಿ ಪ್ರತ್ಯೇಕ ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ ಸ್ಥಾಪಿಸಲು ಸೋಮವಾರ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ ತೀರ್ಮಾನಿಸಿತು.

ಶಿಕ್ಷಣ ಇಲಾಖೆಗೆ ಸರ್ಕಾರ ನೀಡುವ ಹಣದಲ್ಲಿ ಪ್ರತಿಶತ 50 ರಷ್ಟನ್ನು (ವೇತನ ಹೊರತುಪಡಿಸಿ) ಈ ಜಿಲ್ಲೆಗಳಿಗಾಗಿ ಖರ್ಚು ಮಾಡಲು ಕೂಡ ಉನ್ನತ ಮಟ್ಟದ ಸಭೆ ನಿರ್ಧರಿಸಿದೆ. ಸಭೆಯಲ್ಲಿ ಕೈಗೊಂಡ ಇತರ ನಿರ್ಧಾರಗಳು-

  • ಹೊಸದಾಗಿ 8 ಪ್ರಾಥಮಿಕ ಶಾಲೆ, 70 ಪ್ರೌಢಶಾಲೆ ಮಂಜೂರು
  • ಹೆಚ್ಚುವರಿಯಾಗಿ ಶಾಲಾ ಕೊಠಡಿಗಳ ನಿರ್ಮಾಣ
  • ಈ ಭಾಗದ ಶಾಲೆಗಳಿಗೆ ಅಗತ್ಯವಿರುವ 7500 ಶಿಕ್ಷಕರ ನೇಮಕಕ್ಕೆ ಹಸಿರು ನಿಶಾನೆ
ಉತ್ತರ ಕರ್ನಾಟಕದ ಶೈಕ್ಷಣಿಕ ಪ್ರಗತಿಗಾಗಿ ಹಮ್ಮಿಕೊಂಡಿರುವ ಈ ಮಹತ್ವದ ಯೋಜನೆಯನ್ನು ಜುಲೈ 10 ರಂದು ಮುಖ್ಯಮಂತ್ರಿ ಕೃಷ್ಣ ಗುಲ್ಬರ್ಗಾದಲ್ಲಿ ವಿಧ್ಯುಕ್ತವಾಗಿ ಉದ್ಘಾಟಿಸುವರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+