ಬಚಾವಾದ ಜಯಲಲಿತಾ, ಎಚ್ಚರಿಕೆ ನೀಡಿ ತೆಪ್ಪಗಾದ ಸಂಪುಟ ಸಭೆ
ನವದೆಹಲಿ : ನಿರೀಕ್ಷೆಯಂತೆ ಜಯಲಲಿತಾ ಸರ್ಕಾರ ಕುತ್ತಿನಿಂದ ಪಾರಾಗಿದೆ. ಪ್ರಧಾನಿ ವಾಜಪೇಯಿ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ ಸೇರಿದ ಕೇಂದ್ರ ಸಚಿವ ಸಂಪುಟದ ಸಭೆ, ಸಂವಿಧಾನ ವಿರೋಧಿ ಕ್ರಮದ ಹಿನ್ನೆಲೆಯಲ್ಲಿ ಜಯಲಲಿತಾ ಸರ್ಕಾರಕ್ಕೆ ಎಚ್ಚರಿಕೆ ನೀಡುವಷ್ಟಕ್ಕೇ ಸುಮ್ಮನಾಗುವುದರೊಂದಿಗೆ ತಮಿಳುನಾಡಿನ ವಿದ್ಯಮಾನಗಳು ಹೆಚ್ಚುಕಮ್ಮಿ ತಣ್ಣಗಾದಂತಾಗಿದೆ.
ಈ ನಡುವೆ ಕೇಂದ್ರ ಸಚಿವರಾದ ಮುರಸೋಳಿ ಮಾರನ್ ಹಾಗೂ ಟಿ.ಆರ್. ಬಾಲು ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಿರುವ ತಮಿಳುನಾಡು ಸರ್ಕಾರ, ಸಚಿವರ ವಿರುದ್ಧದ ಎಲ್ಲ ಮೊಕದ್ದಮೆಗಳನ್ನು ವಾಪಸ್ಸು ಪಡೆದಿದೆ. ಈ ನಿರ್ಧಾರದಿಂದಾಗಿಯೇ ಸಂಪುಟ ಸಭೆ ಜಯಲಲಿತಾ ಸರ್ಕಾರದ ವಿರುದ್ಧ ಮೆದು ಧೋರಣೆ ಅನುಸರಿಸಿರಲಿಕ್ಕೂ ಸಾಕು.
ಸಂಪುಟ ಸಭೆ ಕೈಗೊಂಡ ಇತರ ಮುಖ್ಯ ತೀರ್ಮಾನಗಳು ಇಂತಿವೆ-- ಜೂನ್ 30 ರಂದು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರನ್ನು ಬಂಧಿಸುವ ಸಮಯದಲ್ಲಿ ಒರಟಾಗಿ ನಡೆದುಕೊಂಡ ಪೊಲೀಸ್ ಅಧಿಕಾರಿಗಳನ್ನು ಗುರ್ತಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶ.
- ಕಾನೂನು, ಸಂವಿಧಾನ ವಿಧಿ- ವಿಧಾನ, ಮಾನವ ಹಕ್ಕು ಹಾಗೂ ಪತ್ರಿಕಾ ಸ್ವಾತಂತ್ರಗಳನ್ನು ದಮನ ಮಾಡಿದ ತಮಿಳುನಾಡು ಸರ್ಕಾರ, ಅವುಗಳನ್ನು ತಕ್ಷಣವೇ ಪುನರ್ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು.
- ಭವಿಷ್ಯದಲ್ಲಿ ಸಂವಿಧಾನ, ಮಾನವ ಹಕ್ಕು ಹಾಗೂ ಪತ್ರಿಕಾ ಸ್ವಾತಂತ್ರ್ಯಗಳನ್ನು ಉಲ್ಲಂಘಿಸುವುದಿಲ್ಲ ಎನ್ನುವ ಬಗೆಗೆ ತಮಿಳುನಾಡು ಸರ್ಕಾರ ಖಾತರಿ ನೀಡಬೇಕು.
ಮುಖಪುಟ / ತಮಿಳುನಾಡು ಬಿಕ್ಕಟ್ಟು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications