ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉಡುಪಿಗೆ ಬನ್ನಿ ! ರಾಷ್ಟ್ರಪತಿಗಳಿಗೆ ಎಸ್.ಎಂ. ಕೃಷ್ಣರಿಂದ ಆಹ್ವಾನ
ಉಡುಪಿ : ಕೃಷ್ಣ ಮಠದಲ್ಲಿ ವಿಶೇಷವಾಗಿ ನಿರ್ಮಿಸಲಾಗಿರುವ ಕನಕ ಮಂಟಪ ಮುಕ್ತಾಯದ ಹಂತಕ್ಕೆ ಬಂದಿದ್ದು, ಕನಕ ಮಂಟಪದ ಉದ್ಘಾಟನೆಯನ್ನು ನೆರವೇರಿಸಬೇಕೆಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ರಾಷ್ಟ್ರಪತಿ ಕೆ. ಆರ್. ನಾರಾಯಣನ್ ಅವರನ್ನು ಕೋರಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೆ ಪರ್ಯಾಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆಹ್ವಾನವನ್ನು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದು, ಸ್ವಾಮೀಜಿಗಳ ಕೋರಿಕೆಯ ಮೇರೆಗೆ ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವುದಾಗಿ ಮುಖ್ಯಮಂತ್ರಿಯವರ ಕಚೇರಿ ಮೂಲಗಳು ತಿಳಿಸಿವೆ.
ಉದ್ಘಾಟನಾ ಸಮಾರಂಭ ಮುಂದಿನ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಇಟ್ಟುಕೊಳ್ಳಲು ನಿರ್ಧರಿಸಲಾಗಿದೆ. ಈ ಕುರಿತ ವಿವರಗಳಿರುವ ಪೇಜಾವರ ಮಠದ ಪರವಾಗಿನ ಆಹ್ವಾನ ಪತ್ರವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ. ಸ್ಥಳೀಯ ರಾಜಕಾರಣಿ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಉಡುಪಿಗೆ ಭೇಟಿ ನೀಡಬೇಕೆಂದು ರಾಷ್ಟ್ರಪತಿಗಳನ್ನು ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)
Story first published: Saturday, July 7, 2001, 5:30 [IST]