ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವೆಂಬರ್‌ ವೇಳೆಗೆ ರಾಜ್ಯದ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಕಂಪ್ಯೂಟರ್‌

By Staff
|
Google Oneindia Kannada News

ಬಳ್ಳಾರಿ : ಬರುವ ನವೆಂಬರ್‌ ಹೊತ್ತಿಗೆ ರಾಜ್ಯದ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಕಂಪ್ಯೂಟರ್‌ಗಳನ್ನು ಅಳವಡಿಸಲಾಗುತ್ತದೆ ಎಂದು ಕಂದಾಯ ಸಚಿವ ಎಚ್‌.ಸಿ.ಶ್ರೀಕಂಠಯ್ಯ ತಿಳಿಸಿದ್ದಾರೆ.

ಇತ್ತೀಚೆಗೆ ಬಳ್ಳಾರಿ ಜಿಲ್ಲೆಗೆ ಭೇಟಿ ಕೊಟ್ಟ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತಾಡುತ್ತಿದ್ದರು. ಬಳ್ಳಾರಿ ಜಿಲ್ಲೆಯಲ್ಲಿನ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಅಕ್ಟೋಬರ್‌ ಹೊತ್ತಿಗೆ ಕಂಪ್ಯೂಟರ್‌ಗಳನ್ನು ಅಳವಡಿಸಲಾಗುವುದು. ತಾಲ್ಲೂಕು ಕಚೇರಿಗಳ ಕಂಪ್ಯೂಟರೀಕರಣದಿಂದ ಮಹತ್ವದ ದಾಖಲೆಗಳನ್ನು ಕಾಪಿಡುವುದು ಸುಲಭವಾಗಲಿದ್ದು, ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಗುರಿ ಇದಾಗಿದೆ. ನವೆಂಬರ್‌ ಹೊತ್ತಿಗೆ ಅವರ ಗುರಿ ಈಡೇರಲಿದೆ ಎಂದು ಸಚಿವರು ಹೇಳಿದರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X