Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ಬರ, ಕೇಂದ್ರದ ನೆರವು ಪಡೆಯಲು ಯತ್ನ - ಕೃಷ್ಣ

ಬೆಂಗಳೂರು : ಕೈ ಕೊಟ್ಟಿರುವ ಮುಂಗಾರಿನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಬಗ್ಗೆ ಸಮೀಕ್ಷೆ ನಡೆಯುತ್ತಿದ್ದು , ಈ ಅಧ್ಯಯನದ ಸಮಗ್ರ ವರದಿಯನ್ನು ಸಲ್ಲಿಸಿ ಕೇಂದ್ರದ ನೆರವು ಕೋರಲಾಗುವುದು ಎಂದು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಹೇಳಿದ್ದಾರೆ.

ಜುಲೈ ತಿಂಗಳ 13 ರೊಳಗೆ ಸಮೀಕ್ಷಾ ವರದಿ ಬರಲಿದ್ದು , ತಕ್ಷಣವೇ ಕೇಂದ್ರದ ನೆರವು ಪಡೆಯಲು ಯತ್ನಿಸುವುದಾಗಿ ಸೋಮವಾರ ಖಾಸಗಿ ವಾಹಿನಿಯಾಂದಕ್ಕೆ ನೀಡಿದ ಸಂದರ್ಶನದಲ್ಲಿ ಕೃಷ್ಣ ಹೇಳಿದರು. ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ಬರದ ಪರಿಸ್ಥಿತಿ ತಲೆದೋರಿದ್ದು , ವಿಶೇಷವಾಗಿ ಉತ್ತರ ಕರ್ನಾಟಕದ ಗುಲ್ಬರ್ಗಾ, ರಾಯಚೂರು, ಬಳ್ಳಾರಿ, ಬಿಜಾಪುರ ಹಾಗೂ ಬೀದರ್‌ಗಳಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ ಎಂದು ಕೃಷ್ಣ ಹೇಳಿದರು.

ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೂ ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದಲ್ಲಿ ಮಳೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ . ಈ ಕಾರಣದಿಂದಾಗಿಯೇ ವಸ್ತು ಸ್ಥಿತಿ ತಿಳಿಸುವಂತೆ ಜನ ಪ್ರತಿನಿಧಿಗಳಿಗೆ ಸೂಚಿಸಲಾಗಿದೆ ಎಂದು ಕೃಷ್ಣ ಹೇಳಿದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+