ಇವರು ಮಳೆಯಿಂದ ಮೋಸ ಹೋಗಿ ವಲಸೆ ಹೋದವರು
ಇಂಡಿ : ಕೊಡಗಿನಲ್ಲಿ ಮಳೆ ಆಕಾಶ ಭೂಮಿ ಒಂದು ಮಾಡುವಂತೆ ಸುರಿಯುತ್ತಿದ್ದರೆ ಇಂಡಿ ತಾಲ್ಲೂಕಿನಲ್ಲಿ ಚಿಕ್ಕೆ ಹನಿಯೂ ಬಿದ್ದಿಲ್ಲ. ಕುಡಿಯುವ ನೀರು ಹೊತ್ತು ತರುವ ಟ್ಯಾಂಕರ್ಗಳಿಗೆ ಕಾಯಲಾರದೆ ಅಲ್ಲಿನ ಮಂದಿ ಊರು ಬಿಟ್ಟು ಹೋಗಲಾರಂಭಿಸಿದ್ದಾರೆ.
ಇಲ್ಲಿನ ಝಳಕಿ, ಹಲಸಂಗಿ, ನಾದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಜನರು ಪರದಾಡುತ್ತಿದ್ದು, ಮಳೆಗಾಲ ಆರಂಭವಾಗಿ ಒಂದುವರೆ ತಿಂಗಳು ಕಳೆದರೂ ಭೂಮಿಯ ಬಿರುಕು ಮುಚ್ಚಿಲ್ಲ. ಈ ಹಿಂದಿನ ವರ್ಷಗಳಲ್ಲಿ ಕೇವಲ 15 ಹಳ್ಳಿಗಳಿಗೆ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿತ್ತು. ಆದರೆ ಈ ಬಾರಿ ಪರಿಸ್ಥಿತಿ ಹೀಗೇ ಮುಂದುವರೆದಲ್ಲಿ 50 ಹಳ್ಳಿಗಳಿಗೂ ಟ್ಯಾಂಕರ್ ಮೂಲಕ ನೀರು ಪೂರೈಸಬೇಕಾಗುತ್ತದೆ ಎಂದು ತಹಶೀಲ್ದಾರ್ ಎಸ್. ಎಸ್. ಡಾಲೆ ಹೇಳುತ್ತಾರೆ.
ನೀರಿಗಾಗಿ ದನಕರುಗಳೂ ಮೈಲಿಗಟ್ಟಲೆ ಅಲೆಯುತ್ತಿವೆ. ಭೀಮಾ ದಂಡೆಯಲ್ಲಿರುವ ಪಡನೂರ, ಬರಗುಡಿ ಮತ್ತು ಖೇಡಗಿ ಪ್ರದೇಶಗಳಲ್ಲಿಯೂ ನೀರಿನ ಪಸೆ ಕಾಣುವುದಿಲ್ಲ. ಈ ಹಳ್ಳಿಗಳ ಮಂದಿಯೂ ಟ್ಯಾಂಕರ್ ನೀರಿಗಾಗಿ ಕಾಯುತ್ತಿದ್ದಾರೆ.
ಬಾರದ ಮಳೆಯ ಮೇಲಿನ ನಂಬಿಕೆ ಹೊರಟು ಹೋಗಿರುವುದರಿಂದ ಕಳೆದ ಒಂದು ವಾರದಿಂದ ತಾಲ್ಲೂಕಿನ ರೈತರು ಮಹಾರಾಷ್ಟ್ರದ ಪುಣೆ, ಸಾಂಗ್ಲಿ , ಸೊಲ್ಲಾಪುರ ಮತ್ತಿತರ ಪ್ರದೇಶಗಳಿಗೆ ಗಂಟು ಮೂಟೆ ಕಟ್ಟಿಕೊಂಡು ವಲಸೆ ಹೋಗಲಾರಂಭಿಸಿದ್ದಾರೆ. ರೈತರು ಹೊಲ ಗದ್ದೆಗಳ ಬಿರುಕು ನೋಡಿಕೊಂಡು ಮಾಡಲು ಕೆಲಸ ವಿಲ್ಲದೆ ಬರಿಗೈಲಿ ಕುಳಿತಿರಲಾರದಾಗಿದ್ದಾರೆ. ಕುಡಿಯಲು ಲೋಟ ನೀರು ಸಿಗದ ಪ್ರದೇಶದಲ್ಲಿ ಬಿತ್ತನೆಗೆಲ್ಲಿ ಅವಕಾಶ ?
-
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications