ಉತ್ತರ ಕರ್ನಾಟಕಅಭಿವೃದ್ಧಿ : ಸೆಪ್ಟೆಂಬರ್ಗೆ ಮುನ್ನಸಭೆ ಕರೆವಂತೆ ಆಗ್ರಹ
ಹುಬ್ಬಳ್ಳಿ : ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮತ್ತೊಮ್ಮೆ ದನಿಯೆದ್ದಿದೆ. ಕಳೆದ ಹಲವಾರು ದಶಕಗಳಿಂದ ಅಧಿಕಾರಕ್ಕೆ ಬಂದ ಎಲ್ಲ ಸರಕಾರಗಳೂ ತೋರಿದ ನಿರ್ಲಕ್ಷ್ಯದಿಂದಾಗಿರುವ ಪ್ರಾದೇಶಿಕ ಅಸಮತೋಲನವನ್ನು ನಿವಾರಿಸಲು ಇನ್ನೆರಡು ತಿಂಗಳೊಳಗೆ ಸಭೆ ಕರೆಯದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಉತ್ತರ ಕರ್ನಾಟಕ ಅಭಿವೃದ್ಧಿಪರ ಹೋರಾಟ ವೇದಿಕೆ ಸರಕಾರಕ್ಕೆ ಎಚ್ಚರಿಕೆ ನೀಡಿದೆ.
ಭಾನುವಾರ ಉತ್ತರ ಕರ್ನಾಟಕ ಅಭಿವೃದ್ಧಿ ಪರ ವೇದಿಕೆಯಡಿ ನಡೆದ ಸಾರ್ವಜನಿಕ ಸಭೆಯಲ್ಲಿ ಕವಿ ಚೆನ್ನವೀರ ಕಣವಿ, ಖ್ಯಾತ ಹಿಂದೂಸ್ಥಾನೀ ಗಾಯಕಿ ಗಂಗೂಬಾಯಿ ಹಾನಗಲ್, ಜಾನಪದ ಸಾಹಿತಿ ಡಾ. ದೇವೇಂದ್ರ ಕುಮಾರ ಹಕಾರಿ ಮುಂತಾದ ಗಣ್ಯರು ಪಾಲ್ಗೊಂಡಿದ್ದರು. ವಿ. ಬಿ. ಹೊಂಬಳ ಅವರು ಅಸಮತೋಲನ ನಿವಾರಣೆ ಕುರಿತ ಚರ್ಚಾ ಸಭೆ ಕರೆಯಲು ಸರಕಾರಕ್ಕೆ ಎರಡು ತಿಂಗಳ ಗಡುವು ನೀಡುವ ನಿರ್ಣಯ ಮಂಡಿಸಿ, ಸರಕಾರ ತನ್ನ ನಿರ್ಲಕ್ಷ್ಯವನ್ನು ಮುಂದುವರೆಸಿದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಹೇಳಿದರು.
ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಉತ್ತರ ಕರ್ನಾಟಕದ ಶಿಕ್ಷಣ ಮತ್ತು ಆರ್ಥಿಕ ತಜ್ಞರು ಹಾಗೂ ಪರಿಣತರ ಸಾಮಾಜಿಕ ಚಿಂತನ ವೇದಿಕೆಯಾಂದನ್ನು ರಚಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು. ಈ ಪ್ರದೇಶದ ಅಭಿವೃದ್ಧಿ ಕುರಿತಂತೆ ಜಾಗೃತಿ ಮೂಡಿಸಲು ಉತ್ತರ ಕರ್ನಾಟಕದ ಶಾಸಕರ ಸಭೆಯನ್ನು ಜುಲೈ 24ರಂದು ಬೆಂಗಳೂರಿನಲ್ಲಿ ಕರೆಯಲಾಗಿದೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಪಾಟೀಲ ಪುಟ್ಟಪ್ಪ ತಿಳಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications