ಅ.2 ರಿಂದ ಸಂಚಾರಿ ಅರಮನೆ ರೈಲಿನಲ್ಲಿಕರ್ನಾಟಕ ದರ್ಶನ ಭಾಗ್ಯ
ಬೆಂಗಳೂರು : ರಾಜಾಸ್ಥಾನ ಮಾದರಿಯ ‘ಅರಮನೆ ರೈಲು’ ಗಾಂಧೀಜಯಂತಿ ದಿನವಾದ ಅಕ್ಟೋಬರ್ 2ರಿಂದ ರಾಜ್ಯದಲ್ಲೂ ತನ್ನ ಸಂಚಾರ ಆರಂಭಿಸಲಿದೆ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಅನುಕೂಲವಾಗಲೆಂದು ಚಲಿಸುವ ಅರಮನೆ ವಿಶೇಷ ರೈಲಿನ ಸೌಲಭ್ಯವನ್ನು ರಾಜ್ಯಕ್ಕೂ ವಿಸ್ತರಿಸಲಾಗಿದೆ.
ಅಕ್ಟೋಬರ್ 2ರಂದು ಬೆಂಗಳೂರಿನಿಂದ ಹೊರಡುವ ರೈಲು ಮೈಸೂರಿನಲ್ಲಿ 2 ದಿನ ಇದ್ದು, ನಂತರ ಹಾಸನದತ್ತ ಪ್ರಯಾಣ ಬೆಳಸಲಿದೆ. ಪ್ರವಾಸಿಗರು, ಶ್ರವಣಬೆಳಗೊಳ, ಬೇಲೂರು, ಹಳೇಬೀಡು ವೀಕ್ಷಿಸಿದ ಬಳಿಕ ರೈಲು ಆಳ್ನಾವರದತ್ತ ಸಾಗಲಿದೆ. ದಾಂಡೇಲಿಯ ಅಭಯಾರಣ್ಯ, ಜಲಪಾತ ವೀಕ್ಷಣೆಯ ನಂತರ ಪ್ರವಾಸಿಗರಿಗೆ ಗದಗಿನಲ್ಲಿ ತಂಗಲು ಅವಕಾಶ ಇದೆ.
ಬದಾಮಿ, ಪಟ್ಟದಕಲ್ಲು, ಐಹೊಳೆ ವೀಕ್ಷಣೆಯ ನಂತರ ಹೊಸಪೇಟೆಗೆ ಪ್ರವಾಸಿಗರನ್ನು ಈ ಅರಮನೆ ರೈಲು ಕರೆತರಲಿದೆ. ಹಂಪೆಯ ವೀಕ್ಷಣೆಯ ಬಳಿಕ ಪ್ರವಾಸದ ಕೊನೆಯ ದಿನ ಸಂಚಾರಿ ಅರಮನೆ ಹೊಸಪೇಟೆಯಿಂದ ಬೆಂಗಳೂರಿಗೆ ಮರಳಲಿದೆ. ಪ್ರವಾಸಿಗರಿಗೆ ರೈಲು ನಿಲ್ದಾಣದ ಹತ್ತಿರ ಸ್ಥಳಗಳ ವೀಕ್ಷಣೆಗೆ ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರಾಯೋಗಿಕವಾಗಿ ಅಕ್ಟೋಬರ್ 2ರಿಂದ ಅರಮನೆ ರೈಲು ಸಂಚಾರ ಆರಂಭ. ಈ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಉನ್ನತ ಮಟ್ಟದ ಸಮಿತಿಯಾಂದನ್ನು ರಚಿಸಲಾಗಿದೆ. ಸಮಿತಿಯಲ್ಲಿ ಕೇಂದ್ರ ಸರಕಾರದ ಅಧಿಕಾರಿಗಳು, ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಉನ್ನತಾಧಿಕಾರಿಗಳೂ ಇದ್ದಾರೆ.
6 ಇರುಳು ಹಾಗೂ 7 ದಿನಗಳ ಈ ಪ್ರವಾಸದಲ್ಲಿ ಪ್ರವಾಸಿಗರಿಗೆ ರೈಲಿನಲ್ಲಿ ಊಟ, ವಸತಿಯ ಜತೆಗೆ ಮನರಂಜನೆಯ ಕಾರ್ಯಕ್ರಮಗಳನ್ನೂ ವ್ಯವಸ್ಥೆ ಮಾಡಲಾಗಿದೆ. ಆದರೆ, ಪ್ರವಾಸ ವೆಚ್ಚ ಮಾತ್ರ ತುಸು ದುಬಾರಿ. ಪ್ರಯಾಣಿಕರು ಈ ರೈಲಿನಲ್ಲಿ ಪ್ರಯಾಣಿಸಲು (ಒಬ್ಬರಿಗೆ) ಪ್ರತಿದಿನಕ್ಕೆ 150ರಿಂದ 200 ಅಮೆರಿಕನ್ ಡಾಲರ್ ತೆರಬೇಕಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications