ಈ ಬಾರಿ ಸಂಭ್ರಮ, ಸಡಗರದ ದಸರಾ ಆಚರಣೆ : ಸರ್ಕಾರದ ಸಮ್ಮತಿ
ಬೆಂಗಳೂರು : ಈ ವರ್ಷ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ವೈಭವದಿಂದ ಆಚರಿಸಲು ರಾಜ್ಯ ಸರಕಾರ ಸಮ್ಮತಿಸಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ದಸರಾ ಕೊಡುಗೆಯಾಗಿ 3 ಕೋಟಿ ರುಪಾಯಿಗಳ ವಿಶೇಷ ಅನುದಾನವನ್ನು ನೀಡಲೂ ಮುಂದಾಗಿದೆ.
ಕಳೆದ ವರ್ಷ ಡಾ. ರಾಜ್ಕುಮಾರ್ ಅಪಹರಣದ ಹಿನ್ನೆಲೆಯಲ್ಲಿ ಮೈಸೂರು ದಸರವನ್ನು ಅತ್ಯಂತ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ದಸರೆಯನ್ನು ವೈಭವದಿಂದ ಆಚರಿಸಬೇಕು ಎಂಬ ಮೈಸೂರು ನಿಯೋಗದ ಮನವಿಗೆ ಸರಕಾರ ಸಮ್ಮತಿ ಸೂಚಿಸಿದೆ.
ಈ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ನೇತೃತ್ವದಲ್ಲಿ ಮೈಸೂರು ಮೇಯರ್ ಬಿ.ಕೆ. ಪ್ರಕಾಶ್, ಉಪಮೇಯರ್ ಆರ್. ಪುಷ್ಪವಲ್ಲಿ ಅರವನ್ನೊಳಗೊಂಡ ನಿಯೋಗವು ಮುಖ್ಯಮಂತ್ರಿ ಕೃಷ್ಣ ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ 3 ಕೋಟಿ ರು.ಗಳ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿ ಸಮ್ಮತಿಸಿದರು.
ಮೈಸೂರಿನಲ್ಲಿ ಏಷಿಯಾ ಅಭಿವೃದ್ಧಿ ಬ್ಯಾಂಕ್ನಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕೂಡ ತ್ವರಿತಗತಿಯಲ್ಲಿ ಮುಗಿಸಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಕೃಷ್ಣ ನೀಡಿದರು. ಬೆಂಗಳೂರು ಕಾರ್ಯಪಡೆಯ ಮಾದರಿಯಲ್ಲಿ ಮೈಸೂರಿನಲ್ಲೂ ಒಂದು ಕಾರ್ಯಪಡೆ ರಚಿಸುವುದಾಗಿ ಮುಖ್ಯಮಂತ್ರಿ ನಿಯೋಗಕ್ಕೆ ಆಶ್ವಾಸನೆ ನೀಡಿದರು.
ಮೈಸೂರಿನ ನಿಯೋಗ ಈ ಬಾರಿ ವೈಭವಯುತವಾಗಿ ನಾಡಹಬ್ಬ ಆಚರಿಸಲು ಮಾಡಿಕೊಂಡ ಮನವಿಗೂ ಕೃಷ್ಣ ತಮ್ಮ ಒಪ್ಪಿಗೆ ಸೂಚಿಸಿದರು. ದಸರಾ ಮೆರವಣಿಗೆ ತೆರಳುವ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ವ್ಯವಸ್ಥೆಯನ್ನು ಈ ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದೂ ತಿಳಿಸಿದರು. ಶಾಸಕರಾದ ಎ. ಗುರುಸ್ವಾಮಿ, ಕಾಂಗ್ರೆಸ್ ಪಕ್ಷದ ನಗರ ಪಾಲಿಕೆ ಸದಸ್ಯರು ಹಾಗೂ ಸ್ಥಳೀಯ ಮುಖಂಡರು ನಿಯೋಗದಲ್ಲಿದ್ದರು.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications