ಎಸ್ಟಿಎಫ್ ಮುಖ್ಯಸ್ಥರಾಗಿ ಥೇವರಂ ನೇಮಕಕ್ಕೆ ಹೈಕೋರ್ಟ್ ಮೊಹರು
ಚೆನ್ನೈ : ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ವಿಶೇಷ ಕಾರ್ಯಪಡೆಯ ಮುಖ್ಯಸ್ಥರನ್ನಾಗಿ ವಾಲ್ಟರ್ ಥೇವರಂ ಅವರ ನೇಮಕವನ್ನು ಚೆನ್ನೈ ಹೈಕೋರ್ಟ್ ಎತ್ತಿ ಹಿಡಿದಿದ್ದು , ಥೇವರಂ ನೇಮಕವನ್ನು ಪ್ರಶ್ನಿಸಿದ್ದ ಮೂರು ಅರ್ಜಿಗಳನ್ನು ವಜಾ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಎನ್.ಕೆ. ಜೈನ್ ಹಾಗೂ ನ್ಯಾಯಮೂರ್ತಿ ಪಿ. ತಂಗವೇಲು ಅವರಿದ್ದ ವಿಭಾಗೀಯ ಪೀಠ ಮಂಗಳವಾರ ಈ ಮಹತ್ವದ ತೀರ್ಪನ್ನು ನೀಡಿದ್ದು , ಥೇವರಂ ನೇಮಕದ ಬಗೆಗಿದ್ದ ಕಾನೂನು ಆತಂಕಗಳು ಹೈಕೋರ್ಟ್ ತೀರ್ಪಿನಿಂದ ಬಗೆಹರಿದಿವೆ. ಥೇವರಂ ಅವರ ನೇಮಕ ಭಾರತೀಯ ಪೊಲೀಸ್ ಸರ್ವೀಸ್ ನಿಯಮಗಳು ಅಥವಾ ಪೊಲೀಸ್ ಆ್ಯಕ್ಟ್ಗಳನ್ನು ಉಲ್ಲಂಘಿಸಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಥೇವರಂ ಅವರನ್ನು ಒಂದು ವರ್ಷ ಕಾಲಾವಧಿಗೆ ಮಾತ್ರ ನೇಮಿಸಿರುವುದನ್ನು ಪ್ರಸ್ತಾಪಿಸಿರುವ ನ್ಯಾಯಾಲಯ, ಥೇವರಂ ಓರ್ವ ಮಾರ್ಗದರ್ಶಿ ಮಾತ್ರ ಎಂದು ಹೇಳಿದೆ. ಥೇವರಂ ಮಾರ್ಗದರ್ಶನದಲ್ಲಿ ಕೆಲಸ ಮಾಡುವ ಐಜಿ ಹಾಗೂ ಇನ್ನಿತರೆ ಅಧಿಕಾರಿಗಳು ಥೇವರಂ ಅವರಿಗಿಂತ ಕೆಳ ದರ್ಜೆಯವರಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಎಲ್ಲ ಅಧಿಕಾರಿಗಳು ಕೇವಲ ತಮಿಳುನಾಡು ಡಿಜಿಪಿ ಅವರಿಗೆ ಮಾತ್ರ ಜವಾಬ್ದಾರರು ಎಂದು ತಿಳಿಸಿದೆ.
(ಏಜೆನ್ಸೀಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications