ವೀರಪ್ಪನ್ ತಂಡದ ಬಗ್ಗೆ ಮತ್ತಷ್ಟು ಸುಳಿವು, ಶಿಕಾರಿಗೆ ಸಜ್ಜಾದ ಪಡೆ
ಮೈಸೂರು : ಕಾಡುಗಳ್ಳ ವೀರಪ್ಪನ್ ಬಗ್ಗೆ ಈಗ ಮತ್ತಷ್ಟು ಮಹತ್ವದ ಸುಳಿವು ಜಂಟಿ ಕಾರ್ಯಪಡೆ ಪೊಲೀಸರಿಗೆ ದೊರಕಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಪ್ರವೇಶಿಸಲು, ಸತ್ಯಮಂಗಲದ ಕರಟ್ಟೂರು ಕೇಂದ್ರದ ಸುಮಾರು ಸಾವಿರಕ್ಕೂ ಹೆಚ್ಚು ಎಸ್.ಟಿ.ಎಫ್. ಯೋಧರು ಸಜ್ಜಾಗಿದ್ದಾರೆ.
ಮಂಗಳವಾರ ಯಾವುದೇ ಕ್ಷಣದಲ್ಲಿ ಈ ಯೋಧರು ಅರಣ್ಯಕ್ಕೆ ನುಗ್ಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಾರ್ಯಪಡೆಯ ವರಿಷ್ಠಾಧಿಕಾರಿಗಳಿಗೆ ವೀರಪ್ಪನ್ ಹಾಗೂ ಅವನ ಸಹಚರರು ಬೀಡುಬಿಟ್ಟಿರುವ ಸ್ಥಳದ ಸುಳಿವು ದೊರೆತಿದೆ. ಆದರೆ, ವೀರಪ್ಪನ್ ಎಲ್ಲಿ ಅಡಗಿದ್ದಾನೆ ಎಂಬುದನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ.
ತಮಗೆ ದೊರೆತಿರುವ ಸ್ಪಷ್ಟ ಹಾಗೂ ನಿಖರ ಮಾಹಿತಿಯ ಮೇರೆಗೆ ತಮಿಳುನಾಡಿನ ಪ್ರತಿ ಜಿಲ್ಲೆಯಿಂದ 50 ಯೋಧರನ್ನು ಎಸ್.ಟಿ.ಎಫ್. ಬಲವರ್ಧನೆಗೆ ಕರೆಸಿಕೊಳ್ಳಲಾಗಿದ್ದು, ಮಂಗಳವಾರ ಬಣ್ಣಾರಿ, ಗುಂಡೇರಿಪಳ್ಳಂ, ಕಡಂಬೂರು ಅರಣ್ಯ ವ್ಯಾಪ್ತಿಯಲ್ಲಿ ಬಿರುಸಿನ ಕಾರ್ಯಾಚರಣೆ ಆರಂಭವಾಗಲಿದೆ.
ಕರ್ನಾಟಕ ಆರಣ್ಯ ಪ್ರದೇಶವನ್ನು ಈಗಾಗಲೇ ಎಸ್.ಟಿ.ಎಫ್. ಯೋಧರು ಸುತ್ತುವರಿದಿದ್ದು, ಕೇರಳ ಕಾಡಿಗೆ ವೀರಪ್ಪನ್ ಪಲಾಯನ ಮಾಡದಂತೆ ತಡೆಯಲು ಶಿರುಮುಗೈ, ಗಾಂಧವಯಲ್ ಹಾಗೂ ಪಿಲ್ಲೂರು ಡ್ಯಾಂ ಕಾನನ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಎಸ್.ಟಿ.ಎಫ್. ಮೂಲಗಳು ಹೇಳಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications