ಪಡಿತರ ವ್ಯವಸ್ಥೆ : ಅಕ್ಕಿ-ಗೋಧಿ ಬೆಲೆಯಲ್ಲಿ ಶೇ 30ರಷ್ಟು ಕಡಿತ
ನವದೆಹಲಿ : ಬಡತನ ರೇಖೆಗಿಂತ ಮೇಲಿನ ವರ್ಗದವರಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ನೀಡುವ ಅಕ್ಕಿ ಮತ್ತು ಗೋಧಿಯ ಬೆಲೆಯನ್ನು ಸರಕಾರವು ಶೇ 30ರಷ್ಟು ಇಳಿಸಿದೆ.
ಆಹಾರ ಧಾನ್ಯ ದಾಸ್ತಾನನ್ನು ಕಡಿಮೆ ಮಾಡುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಗೋಧಿ ಉತ್ಪನ್ನಗಳ ರಫ್ತಿಗಾಗಿ, ರೋಲರ್ ಹಿಟ್ಟಿನ ಗಿರಣಿಗಳಿಗೆ 20 ಲಕ್ಷ ಟನ್ ವರೆಗೆ ಗೋಧಿ ಒದಗಿಸಲು ಭಾರತೀಯ ಆಹಾರ ನಿಗಮಕ್ಕೆ ಸರಕಾರ ಅನುಮತಿ ನೀಡಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಮೋದ್ ಮಹಾಜನ್, ಈ ವ್ಯವಸ್ಥೆ 2002ರ ಮಾರ್ಚ್ 31ರವರೆಗೆ ಜಾರಿಯಲ್ಲಿರುತ್ತದೆ. ಆದರೆ ಅದಕ್ಕೆ ಮುಂಚೆಯೇ ದಾಸ್ತಾನು ಮುಗಿದರೆ ತಕ್ಷಣ ಈ ವ್ಯವಸ್ಥೆಯನ್ನು ನಿಲ್ಲಿಸಲಾಗುವುದು ಎಂದರು.
ಹೊಸ ವ್ಯವಸ್ಥೆಯ ಪ್ರಕಾರ ಗೋಧಿ ಬೆಲೆ ಕ್ವಿಂಟಾಲ್ಗೆ 220 ರೂಗಳಷ್ಟು ಕಡಿಮೆಯಾಗಿ 610 ರೂ. ಹಾಗೂ ಅಕ್ಕಿ ಬೆಲೆ ಕ್ವಿಂಟಾಲ್ಗೆ 300ರಷ್ಟು ಇಳಿದು 830 ರೂ. ಆಗಲಿದೆ. ಈ ವ್ಯವಸ್ಥೆಯಿಂದಾಗಿ ಬಡತನ ರೇಖೆಗಿಂತ ಕೆಳಗಿನವರಿಗೆ ನೀಡುತ್ತಿರುವ ಪಡಿತರ ಗೋಧಿ ಮತ್ತು ಅಕ್ಕಿ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications