ಮೈದುಂಬಿದ ಕಬಿನಿ ಮತ್ತು ಹಾರಂಗಿ, ನೆರೆ ನಡುವೆ ನಂಜನಗೂಡು
ಮಡಿಕೇರಿ: ಜಿಲ್ಲೆಯಾದ್ಯಂತ ಸುರಿದ ಮಳೆಗೆ ಹಾರಂಗಿ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿವೆ. ಪರಿಣಾಮವಾಗಿ ನಂಜನಗೂಡಿನ ಪ್ರಸಿದ್ಧ ನಂಜುಡೇಶ್ವರ ದೇವಾಲಯ ನೀರಿನಿಂದ ಆವೃತವಾಗಿದೆ.
ಭರ್ತಿಯಾಗಿರುವ ಕಬಿನಿ ಜಲಾಶಯದ ಎಲ್ಲ ಗೇಟುಗಳನ್ನು ಸೋಮವಾರ ಸಂಜೆ ತೆಗೆದು ಕಾವೇರಿಗೆ ನೀರು ಬಿಡಲಾಗಿದೆ. ಇನ್ನಷ್ಟು ಮಳೆ ಬರುವ ನಿರೀಕ್ಷೆಯಿಂದ ಮಾದೇಕಟ್ಟೆ ಹಳ್ಳಿಯನ್ನು ಖಾಲಿ ಮಾಡಿ ನಿವಾಸಿಗಳನ್ನು ತಾತ್ಕಾಲಿಕ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಕಬಿನಿ ಜಲಾಶಯದ ಕೆಳ ದಂಡೆಯಲ್ಲಿ ವಾಸಿಸುವ ಮಂದಿಗೆ ಹಾಗೂ ಹೆಗ್ಗಡದೇವನ ಕೋಟೆಯ ನಿವಾಸಿಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಕಿಟ್ಟರಮಲ್ಲ ಮತ್ತು ಮೂಡುಕುತೊರೆ ಪ್ರದೇಶದಲ್ಲಿ ಈಗಾಗಲೇ ನೀರು ತುಂಬಿಕೊಂಡಿದೆ. ಟೀ ನರಸೀಪುರ ಮತ್ತು ನಂಜನಗೂಡಿನ ನಿವಾಸಿಗಳೂ ಎತ್ತರ ಪ್ರದೇಶಕ್ಕೆ ತೆರಳುತ್ತಿದ್ದಾರೆ.
ಕೊಡಗಿನ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ನದಿದಂಡೆಯಲ್ಲಿ ವಾಸಿಸುತ್ತಿರುವವರಿಗೆ ಗಂಟೆ ಮೂಟೆ ಕಟ್ಟಿಕೊಂಡು ಎತ್ತರದ ಪ್ರದೇಶಕ್ಕ ಹೋಗುವಂತೆ ಆಜ್ಞಾಪಿಸಲಾಗಿದೆ.
ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗಿರುವುದರಿಂದ ಜಲಾಶಯಕ್ಕೆ 5.42 ಅಡಿ ನೀರು ಬಂದಿದೆ. 37 ಸಾವಿರ ಕ್ಯೂಸೆಕ್ಸ್ ನೀರಿನ ಒಳಹರಿವು ಬಂದಿದ್ದು, 35.464 ಟಿಎಂಸಿ ನೀರು ಶೇಖರಣೆಯಾಗಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣ ರಾಜ ಸಾಗರದಲ್ಲಿಯೂ ನೀರಿನ ಮಟ್ಟ 92.50 ಅಡಿಗಳಿಗೇರಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications