‘ಅಸಮರ್ಥ ಸಚಿವರಿಗೆ ಎಚ್ಚರಿಕೆ, ದಕ್ಷ- ಸಮರ್ಥ ಸಚಿವರಿಗೆ ಪ್ರಶಂಸೆ’
ಬೆಂಗಳೂರು : ‘ಅದಕ್ಷ ಹಾಗೂ ಅಸಮರ್ಥ ಸಚಿವರಿಗೆ ಎಚ್ಚರಿಕೆ, ದಕ್ಷ- ಸಮರ್ಥ ಸಚಿವರಿಗೆ ಪ್ರಶಂಸೆ’- ಇದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸರ್ಕಾರದ ಪರಾಮರ್ಶೆಗೆ ಆಗಮಿಸಿರುವ ಕಾಂಗ್ರೆಸ್ ವರಿಷ್ಠ ಮಂಡಳಿ ಮೌಲ್ಯ ಮಾಪನಕ್ಕಾಗಿ ಅನುಸರಿಸುತ್ತಿರುವ ಮಾನದಂಡ.
ಮೌಲ್ಯಮಾಪನಕ್ಕೆ ಆಗಮಿಸಿರುವ ತ್ರಿಸದಸ್ಯ ವರಿಷ್ಠ ಮಂಡಳಿಯ ಸದಸ್ಯರಲ್ಲೊಬ್ಬರಾದ ಅಂಬಿಕಾ ಸೋನಿ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು. ಚೆನ್ನಾಗಿ ಕೆಲಸ ಮಾಡಿರುವ ಸಚಿವರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸಲಾಗುವುದು. ಅದಕ್ಷ ಮಂತ್ರಿಗಳಿಗೆ ಎಚ್ಚರಿಕೆ ನೀಡಲಾಗುವುದು ಹಾಗೂ ಅವರಿಗೆ ಸರಿಯಾಗಿ ಕೆಲಸ ಮಾಡುವಂತೆ ಸೂಚನೆ ನೀಡಲಾಗುವುದು ಎಂದು ಬುಧವಾರ ನಗರಕ್ಕಾಗಮಿಸಿದ ಅಂಬಿಕಾ ಸೋನಿ ಸುದ್ದಿಗಾರರಿಗೆ ಹೇಳಿದರು.
ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರದ ಪರಾಮರ್ಶೆ ನಡೆಸುತ್ತಿರುವುದಾಗಿ ಸ್ಪಷ್ಟಪಡಿಸಿದ ಸೋನಿ, ಸಚಿವರು ಮತ್ತು ಪಕ್ಷ ಜನತೆಗೆ ಬದ್ಧರಾಗಿದ್ದು ಚುರುಕಿನಿಂದ ಕೆಲಸ ಮಾಡಬೇಕು ಎಂದು ಅಭಿಪ್ರಾಯ ಪಟ್ಟರು.
ಕರ್ನಾಟಕದಲ್ಲಿ ಮಾತ್ರ ಇಂಥಾ ಪರಾಮರ್ಶೆ ನಡೆಯುತ್ತಿಲ್ಲ , ಕಾಂಗ್ರೆಸ್ ಅಧಿಕಾರದಲ್ಲಿ ಇರುವ ಎಲ್ಲ ರಾಜ್ಯಗಳಲ್ಲಿಯೂ ಆಯಾ ರಾಜ್ಯ ಸರ್ಕಾರಗಳ ಪರಾಮರ್ಶೆ ನಡೆಯುತ್ತಿದೆ ಎನ್ನುವುದನ್ನು ಒತ್ತಿ ಹೇಳಿದ ಅವರು- ಬರ ಪರಿಹಾರ ಕಾಮಗಾರಿ, ವಿದ್ಯುತ್ ಕೌರತೆ, ವಸತಿ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಲಾಗುವುದು ಎಂದರು.
ಕೊನೆಯದಾಗಿ- ಬುಧವಾರ ಸಂಜೆಯಿಂದ ರಾಜ್ಯ ಸರ್ಕಾರದ ಪರಾಮರ್ಶೆ ಕಾರ್ಯ ಆರಂಭವಾಗಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications