‘ಸೈನ್ಯ ಕೊಡಿ, ಕಾಶ್ಮೀರದ ಸಮಸ್ಯೆ ಕೊನೆಗಾಣಿಸುತ್ತೇನೆ’- ಬಾಳಾಠಾಕ್ರೆ
ಮುಂಬಯಿ : 'ಸೇನೆಯನ್ನು ನನಗೊಪ್ಪಿಸಿ, ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುತ್ತೇನೆ". ಆಗ್ರಾ ಶೃಂಗಸಭೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿಗೆ ಶಿವಸೇನೆಯ ಮುಖ್ಯಸ್ಥ ಬಾಳಾಠಾಕ್ರೆ ಎತ್ತಿರುವ ಧ್ವನಿಯಿದು.
ಶಿವಸೇನಾ ಭವನದಲ್ಲಿ ನಿವೃತ್ತ ಜನರಲ್ ಪ್ರೇಮ್ನಾಥ್ ಹೂನ್ರೊಂದಿಗೆ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಠಾಕ್ರೆ- ಆಗ್ರಾ ಶೃಂಗಸಭೆ 53 ವರ್ಷಗಳಷ್ಟು ಹಳೆಯದಾದ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಲ್ಲಿ ಯಶಸ್ವಿಯಾಗುವ ಬಗೆಗೆ ಶಂಕೆಗಳನ್ನು ವ್ಯಕ್ತಪಡಿಸಿದರು.
ಸೂಕ್ಷ್ಮ ವಿಷಯಗಳ ಬಗ್ಗೆ ಶಿವಸೇನೆಯ ಅಭಿಪ್ರಾಯವನ್ನು ಪಡೆಯದಿರುವ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟದ ನಡವಳಿಕೆಯನ್ನು ಆಕ್ಷೇಪಿಸಿದ ಠಾಕ್ರೆ, ದೇಶದ ಹಿತದೃಷ್ಟಿಯಿಂದಾಗಿ ವಾಜಪೇಯಿ ಸರ್ಕಾರಕ್ಕೆ ಬೆಂಬಲ ಮುಂದುವರಿಸುವುದಾಗಿ ಹೇಳಿದರು.
ಗುಂಡಿನ ಚಕಮಕಿ ನಿಲ್ಲಿಸುವಂತೆ ಆಗ್ರಹಪಡಿಸಿ
ಪ್ರಕ್ಷುಬ್ಧ ಪ್ರದೇಶಗಳಲ್ಲಿ ಗುಂಡಿನ ಚಕಮಕಿಯನ್ನು ನಿಲ್ಲಿಸಲು ಹಾಗೂ ಭೂಭಾಗಗಳನ್ನು ಗುರ್ತಿಸಿರುವ ನಕ್ಷೆಗಳನ್ನು ಬದಲಾಯಿಸಿಕೊಳ್ಳಲು ಪಾಕಿಸ್ತಾನವನ್ನು ಒತ್ತಾಯಿಸಬೇಕು ಎಂದು ಸಿಯಾಚಿನ್ ಕದನದಲ್ಲಿ ಹೋರಾಡಿದ ಅನುಭವವಿರುವ ನಿವೃತ್ತ ಜನರಲ್ ಪ್ರೇಮ್ನಾಥ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಗಡಿ ಪ್ರದೇಶದಲ್ಲಿ ಸೇನಾ ಜಮಾವಣೆಯನ್ನು ಕಡಿತಗೊಳಿಸುವಂತೆಯೂ ಪಾಕಿಸ್ತಾನವನ್ನು ಒತ್ತಾಯಿಸಬೇಕು ಎಂದು ಅವರು ಆಗ್ರಹಿಸಿದರು.
ನಿವೃತ್ತ ಸೇನಾ ಅಧಿಕಾರಿಗಳ ಪಡೆಯಾಂದನ್ನು ಶಿವಸೇನೆ ರೂಪಿಸುತ್ತಿದ್ದು , ಈ ಪಡೆ ಗಡಿ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದರಿಂದಾಗಿ ಸರ್ಕಾರದ ರಕ್ಷಣಾ ವೆಚ್ಚ ಕಡಿಮೆಯಾಗಲಿದೆ ಎಂದು ನಿವೃತ್ತ ಜನರಲ್ ಪ್ರೇಮ್ನಾಥ್ ಹೇಳಿದರು.(ಇನ್ಫೋ ವಾರ್ತೆ)
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications